Home Mangalorean News Kannada News ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

Spread the love

ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರು  ಜಿಲ್ಲೆಯಲ್ಲಿ ವಕೀಲರು  ಮತ್ತು ಪೊಲೀಸರ  ನಡುವಿನ ಜಟಾಪಟಿ ತಾರಕಕ್ಕೆ ಏರಿದೆ. ಹೆಲ್ಮೆಟ್  ಹಾಕದ ವಿಚಾರವಾಗಿ ವಕೀಲ ಪ್ರೀತಮ್​ ಎಂಬುವರ ಮೇಲೆ ಶುಕ್ರವಾರ ಪೊಲೀಸರು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲರು ಪೊಲೀಸ್​ ಠಾಣೆಯಲ್ಲಿ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವಕೀಲರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್​ಐಆರ್​ ದಾಖಲಾಗಿವೆ.


ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಹಲ್ಲೆ ನಡೆಸಿದವರ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ಒತ್ತಾಯಿಸಿದರು. ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರತಿಭಟನೆಯಲ್ಲಿ ಪೋಲಿಸ್ ಸಂಘ ಸ್ಥಾಪನೆಯ ಕೂಗು ಕೇಳಿ ಬಂದಿದೆ. ಪೊಲೀಸ್ ಸಿಬ್ಬಂದಿಗಳು ನಮಗೂ ಸಂಘ ಬೇಕು ಎಂದು ಚರ್ಚೆ ನಡೆಸಿದರು. ಪೋಲಿಸ್ ಸಂಘ ಸ್ಥಾಪನೆಗೆ ಈ ಹಿಂದೆ ಹಿರಿಯ ಅಧಿಕಾರಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ನಿನ್ನೆ (ಡಿ.02)ರ ರಾತ್ರಿ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಸಂಘ ಸ್ಥಾಪನೆಗೆ ಸಿದ್ದತೆ ನಡೆದಿದ್ದು, ಸಂಘವನ್ನು ರಿಜಿಸ್ಟರ್ ಮಾಡಿಸುವ ಬಗ್ಗೆ ಚರ್ಚೆ ನಡೆದಿದೆ. ಸೋಮವಾರ ರಿಜಿಸ್ಟರ್ ಮಾಡಿಸುವ ಸಾಧ್ಯತೆ ಇದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಅವರಿಗೆ ಪೊಲೀಸ್ ಇಲಾಖೆಗೆ ಸಂಘ ಯಾಕಿಲ್ಲ ಎಂದು ಪೊಲೀಸರ ಕುಟುಂಬಸ್ಥರು ಪ್ರಶ್ನೆ ಮಾಡಿದರು. ಆಗ ಐಜಿಪಿ ಚಂದ್ರಗುಪ್ತ ಅವರು ಇದು ನಿಮಗೆ ಅರ್ಥವಾಗಲ್ಲವೆಂದು ಹೇಳಿದರು.

ಎಫ್​ಐಆರ್ ದಾಖಲಾಗಿರುವ 6 ಸಿಬ್ಬಂದಿಯನ್ನು ಬಂಧಿಸಬಾರದು. ಪೊಲೀಸ್ ಸಿಬ್ಬಂದಿಯ ಅಮಾನತು ಆದೇಶ ಹಿಂಪಡೆಯಬೇಕು ಎಂದು ಡಿ.5ರವರೆಗೂ ಇಲಾಖೆಗೆ ಗಡುವು ನೀಡಿ ಪೊಲೀಸರು ಧರಣಿ ಹಿಂಪಡೆದರು. ಇನ್ನು ವಕೀಲರ ಮೇಲೆ ಹಲ್ಲೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಗುರುಪ್ರಸಾದ್‌ ಅವರನ್ನು ಡಿವೈಎಸ್​ಪಿ ಶೈಲೇಂದ್ರ ಕುಮಾರ್ ಅವರು ವಿಚಾರಣೆ ನಡೆಸಿ ಬಿಡುಗಡೆ ಮಾಡಿದರು.


Spread the love

Exit mobile version