ಡಾ.ದಯಾನಂದ ಬಲ್ಲಾಳ್ ನಿಧನ  

Spread the love

ಡಾ.ದಯಾನಂದ ಬಲ್ಲಾಳ್ ನಿಧನ  

ಕುಂದಾಪುರ: ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ನಿವೃತ್ತ ವೈದ್ಯಕೀಯ ನಿರ್ದೇಶಕರಾದ ಹೆಬ್ರಿ ಬೀಡು ಡಾ.ದಯಾನಂದ ಬಲ್ಲಾಳ್ (87) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಗುರುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮದ್ರಾಸಿನಲ್ಲಿ ವೈದ್ಯಕೀಯ ಶಿಕ್ಷಣಾಭ್ಯಾಸ ಮಾಡುತ್ತಿದ್ದಾಗ ಅಂದಿನ ಮದ್ರಾಸ್ ರಾಜ್ಯದ ರಣಜಿ ತಂಡವನ್ನು ಪ್ರತಿನಿಧಿಸಿದ್ದ ಅವರು, ಕರ್ನಾಟಕ ರಾಜ್ಯ ಸರ್ಕಾರಿ ಅಧಿಕಾರಿಗಳ ತಂಡದ ಅಂತಾರಾಷ್ಟ್ರೀಯ ಟೆನಿಸ್ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿಯೂ ಸೇವೆ ಸಲ್ಲಿಸಿದ್ದರು.

ಪುತ್ರಿ ಶಾಂತಿ ಪಿ ಶೆಟ್ಟಿ ಅವರ ಪತಿ ಡಾ.ಪ್ರಕಾಶ್ಚಂದ್ರ ಶೆಟ್ಟಿ ಬೆಂಗಳೂರಿನ ರಾಮಯ್ಯ ದಂತ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಹಾಗೂ ನಿರ್ದೇಶಕರಾಗಿದ್ದರು. ಪುತ್ರರಾದ ಡಾ.ಮದನ್ ಬಲ್ಲಾಳ್ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿದ್ದಾರೆ. ರಾಮ್‌ ಬಲ್ಲಾಳ್ ಅಮೇರಿಕಾದ ಫೋರ್ಡ್ ಕಾರ್ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ. ಪತ್ನಿ ಉಷಾ ಡಿ ಬಲ್ಲಾಳ್ ಹಾಗೂ ಬಂಧು-ಬಳಗವನ್ನು ಅಗಲಿದ್ದಾರೆ.

ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಹೆಬ್ಬಾಳದ ಹಿಂದೂ ರುದ್ರಭೂಮಿಯ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ವಿಧಿಗಳನ್ನು ನೆರವೇರಿಸಲಾಯಿತು.


Spread the love