ದಿನೇಶ್ ಗುಂಡೂ ರಾವ್ ಅವರಿಂದ ಪೇಜಾವರ ಸ್ವಾಮೀಜಿ ಆರೋಗ್ಯ ವಿಚಾರಣೆ

Spread the love

ದಿನೇಶ್ ಗುಂಡೂ ರಾವ್ ಅವರಿಂದ ಪೇಜಾವರ ಸ್ವಾಮೀಜಿ ಆರೋಗ್ಯ ವಿಚಾರಣೆ

ಉಡುಪಿ: ಶ್ವಾಸಕೋಶ ತೊಂದರೆ, ನ್ಯುಮೋನಿಯಾ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ಪೇಜಾವರ ಶ್ರೀಗಳ ದರ್ಶನ ಪಡೆದಿದ್ದು, ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ. ಅವರ ಆರೋಗ್ಯದ ಬಗ್ಗೆ ನನಗೆ ಬಹಳ ಆತಂಕ ಆಗಿತ್ತು ಆದ್ದರಿಂದ ಬಂದು ನೋಡಬೇಕು ಅಂತಾ ನಿರ್ಧಾರ ಮಾಡಿದೆ. ಆಧ್ಯಾತ್ಮಿಕ,ಧಾರ್ಮಿಕ ಸೇವೆ ಮಾಡಿದ ವಿಶೇಷ ಶಕ್ತಿ ಅವರಾಗದ್ದು, ಎಲ್ಲಾ ವಿಷಯದ ಬಗೆಗೂ ತನ್ನದೇ ಅಭಿಪ್ರಾಯ ವ್ಯಕ್ತಪಡಿಸುವವರು. ಅವರ ಬಗ್ಗೆ ರಾಜ್ಯ,ರಾಷ್ಟ್ರದಲ್ಲಿ ಗೌರವವಿದೆ, ವಯಸ್ಸಾದ್ರು ಸುಮ್ಮನೇ ಕೂರುತ್ತಿರಲಿಲ್ಲ ಅವರ ಆರೋಗ್ಯ ಚೇತರಿಕೆಯಾಗಬೇಕು ಎಂದರು.

ಈ ವೇಳೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ , ಅಭಯಚಂದ್ರ ಜೈನ್, ಮಾಜಿ ಸಚಿವರಾದ ಗೋಪಾಲ ಪೂಜಾರಿ, ಯು ಆರ್ ಸಭಾಪತಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ನಾಯಕರಾದ ಎಮ್ ಎ ಗಫೂರ್ ಹಾಗೂ ಇತರರು ಉಪಸ್ಥಿತರಿದ್ದರು.


Spread the love