ದೇಯಿ ಬೈದೆತಿ ಮೂರ್ತಿ ಬಳಿ ಅವಹೇಳನ; ಸಂಸದ ನಳಿನ್ ಖಂಡನೆ

Spread the love

ದೇಯಿ ಬೈದೆತಿ ಮೂರ್ತಿ ಬಳಿ ಅವಹೇಳನ; ಸಂಸದ ನಳಿನ್ ಖಂಡನೆ

ಮಂಗಳೂರು : ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ಅಪ್‍ಲೋಡ್ ಮಾಡಿರುವುದು ಆಘಾತಕಾರಿ ವಿಷಯವಾಗಿದೆ. ಈಗಾಗಲೇ ಪೋಲೀಸರು ಆರೋಪಿಯನ್ನು ಬಂಧಿಸಿರುವುದು ಶ್ಲಾಘನೀಯ. ಹೀನ ಕೃತ್ಯ ಎಸಗಿದ ಮತಾಂಧ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ದ.ಕ.ಸಂಸದ ನಳಿನ್‍ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡುವ ಘಟನೆ ಕರಾವಳಿಯಲ್ಲಿ ಆಗಾಗ ನಡೆಯುತ್ತಿದೆ. ಪ್ರಗತಿಪರರ ಹೆಸರಿನಲ್ಲಿ ಕೆಲವರು ಇದಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾರಣ ಮತಾಂಧರು ನಿರಾಂತಕವಾಗಿ ಇಂತಹ ಕೃತ್ಯ ಎಸಗುತ್ತಿದ್ದಾರೆ. ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ಅನಾಗರಿಹ ವರ್ತನೆ ತೋರಿದ ಕೃತ್ಯವನ್ನು ಆಸ್ತಿಕರು ಸಹಿಸಲು ಸಾಧ್ಯವಿಲ್ಲ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಸಮಾಜದ ಶಾಂತಿ ಕದಡುವ ಇಂತಹ ಕೃತ್ಯ ಮರುಕಳಿಸದಂತೆ ಪೋಲೀಸರು ಎಚ್ಚರ ವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love