Spread the love
ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಧರ್ಮಗಳ ಮಧ್ಯೆ ದ್ವೇಷಕಾರುವ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಉಪನ್ಯಾಸಕ ಡಾ. ಅರುಣ್ ಉಳ್ಳಾಲ್ ವಿರುದ್ಧ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಈತ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವಂತಹ ಭಾಷಣ ಮಾಡಿದ್ದಾನೆ ಎಂಬ ಆರೋಪ ಈತನ ಮೇಲೆ ಕೇಳಿ ಬಂದಿತ್ತು. ಅಲ್ಲದೆ ಈತನ ಭಾಷಣದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪೊಲೀಸ್ ಇಲಾಖೆಯು ಕಾನೂನು ಕ್ರಮಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿ ಬಂದಿತ್ತು. ಈ ಬಗ್ಗೆ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದೆ.
Spread the love