Home Mangalorean News Kannada News ದ.ಕ. ಜಿಲ್ಲಾ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಂಯೋಜಕರ ನೇಮಕ

ದ.ಕ. ಜಿಲ್ಲಾ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಂಯೋಜಕರ ನೇಮಕ

Spread the love

ದ.ಕ. ಜಿಲ್ಲಾ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಂಯೋಜಕರ ನೇಮಕ

ಮಂಗಳೂರು:  ದ.ಕ. ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

205 ಬಂಟ್ವಾಳ ಕ್ಷೇತ್ರ-ಮಾಜಿ ಮೇಯರ್ ಶಶಿಧರ್ ಹೆಗ್ಡೆ, 201 ಮೂಡಬಿದ್ರೆ ಕ್ಷೇತ್ರ – ಮಾಜಿ ಮೇಯರ್ ಮಹಾಬಲ ಮಾರ್ಲ, ಕಾರ್ಪೊರೇಟರ್ ಅನಿಲ್ ಕುಮಾರ್, 207 ಸುಳ್ಯ ಕ್ಷೇತ್ರ – ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ, 202 ಮಂಗಳೂರು ಉತ್ತರ ಕ್ಷೇತ್ರ – ಕಾರ್ಪೊರೇಟರ್ ಅಬ್ದುಲ್ ರವೂಫ್, 203 ಮಂಗಳೂರು ದಕ್ಷಿಣ ಕ್ಷೇತ್ರ- ಸಂತೋಷ್ ಕುಮಾರ್ ಶೆಟ್ಟಿ, ಲಾರೆನ್ಸ್ ಡಿಸೋಜ, 200 ಬೆಳ್ತಂಗಡಿ ಕ್ಷೇತ್ರ – ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, 204 ಮಂಗಳೂರು ಕ್ಷೇತ್ರ – ಕೆಪಿಸಿಸಿ ಸದಸ್ಯೆ ಎಸ್.ಅಪ್ಪಿ, ಕಾರ್ಪೊರೇಟರ್ ಅಶ್ರಫ್ ಬಜಾಲ್, 206 ಪುತ್ತೂರು-ಆರ್.ಜಿ.ಪಿ.ಆರ್.ಎಸ್ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು, ಅಲ್ತಾಫ್ ಮೊಹಮ್ಮದ್ ಅವರು ನೇಮಕಗೊಂಡಿದ್ದಾರೆ.


Spread the love

Exit mobile version