ನಗರದಲ್ಲಿ ಅನೈತಿಕ ಪೋಲಿಸ್ ಗಿರಿ; ಹಿಂದೂ ಕಾರ್ಯಕರ್ತರಿಂದ ವಿದ್ಯಾರ್ಥಿಗಳಿಗೆ ಹಲ್ಲೆ

Spread the love

ನಗರದಲ್ಲಿ ಅನೈತಿಕ ಪೋಲಿಸ್ ಗಿರಿ; ಹಿಂದೂ ಕಾರ್ಯಕರ್ತರಿಂದ ವಿದ್ಯಾರ್ಥಿಗಳಿಗೆ ಹಲ್ಲೆ

ಮಂಗಳೂರು: ಹಿಂದೂ ಕಾರ್ಯಕರ್ತರು ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸುವುದರ ಮೂಲಕ ಇನ್ನೊಮ್ಮೆ ಅನೈತಿಕ ಪೋಲಿಸ್ ಗಿರಿ ನಗರದ ವಾಮಂಜೂರಿನ ಮಾನಸ ವಾಟರ್ ಪಾರ್ಕ್ ನಲ್ಲಿ ಮಂಗಳವಾರ ನಡೆದಿದೆ.

ಐಕಳದ ಕಾಲೇಜೊಂದರ ವಿದ್ಯಾರ್ಥಿಗಳು ಪಿಲಿಕುಳದ ಮಾನಸ ವಾಟರ್ ಪಾರ್ಕಿಗೆ ಪ್ರವಾಸಕ್ಕಾಗಿ ಆಗಮಿಸಿದ್ದರು ಎನ್ನಲಾಗಿದ್ದು, ಪಾರ್ಕಿನಲ್ಲಿ ಸಂತೋಷದಿಂದ ಸಮಯ ಕಳೆಯುತ್ತಿದ್ದ ವೇಳೆ ಹಿಂದೂ ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ಧಾಳಿ ನಡೆಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಗಳ ಗುಂಪಿನಲ್ಲಿ ಬೇರೆ ಬೇರೆ ಕೋಮಿನ ವಿದ್ಯಾರ್ಥಿಗಳು ಇದ್ದರೂ ಕೂಡ ಹಿಂದೂ ಕಾರ್ಯಕರ್ತರು ವಿದ್ಯಾರ್ಥಿಗಳನ್ನು ಸುತ್ತುವರಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಂಗಳೂರು ಗ್ರಾಮಾಂತರ ಪೋಲಿಸರು ವಿದ್ಯಾರ್ಥಿಗಳಿಗೆ ಸೂಕ್ತ ಭದ್ರತೆಯನ್ನು ಒದಗಿಸಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.


Spread the love