ನಾಮಪತ್ರ ಸಲ್ಲಿಕೆಗೂ ಸರ್ವಧರ್ಮ ಸಮನ್ವಯತೆ ಮೆರೆದ ವಿನಯ್ ಕುಮಾರ್ ಸೊರಕೆ 

Spread the love

ನಾಮಪತ್ರ ಸಲ್ಲಿಕೆಗೂ ಸರ್ವಧರ್ಮ ಸಮನ್ವಯತೆ ಮೆರೆದ ವಿನಯ್ ಕುಮಾರ್ ಸೊರಕೆ 

ಕಾಪು: ನಾಮಪತ್ರ ಸಲ್ಲಿಕೆಗೂ ಮುನ್ನ ಕಾಪು ಕಾಂಗ್ರೆಸ್ ಅಭ್ಯರ್ಥಿ  ಕಾಪು ಶಾಸಕ ವಿನಯ್ ಕುಮಾರ್ ಸೊರಕೆಯವರು ಸರ್ವಧರ್ಮ ದ ಮುಖಂಡರನ್ನು ಭೇಟಿ ಮಾಡಿ ದೇವಸ್ಥಾನ, ಚರ್ಚ್ , ಮಸೀದಿಯಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.

ಮಂಗಳೂರು ಕದ್ರಿ ಮಂಜುನಾಥೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಮೊದಲು ಪೂಜೆ ಸಲ್ಲಿಸಿದ ವಿನಯ್ ಕುಮಾರ್ ಸೊರಕೆ ಯವರು ಪಡುಬಿದ್ರಿ ನಾಗ ಬ್ರಹ್ಮ ಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಕಾಪು ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ , ಕಾಪು ಮಾರಿಗುಡಿಯಲ್ಲಿ ಪ್ರಾರ್ಥಿಸಿದರು. ಅನಂತರ ಕಾಪು ಪೊಲಿಪು ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಅಲ್ಲಿನ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಿದರು.

ನಂತರ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ನಂತರ ಕಾಪು ವೆಂಕಟರಮಣ ದೇವಸ್ಥಾನಕ್ಕೂ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಅನಂತರ ಉದ್ಯಾವರ ಚರ್ಚ್ ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಉಡುಪಿ ಬಿಷಪ್ ರ. ಡಾ| ಜೆರಾಲ್ಡ್ ಐಸಾಕ್ ಲೋಬೊ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ನಂತರ ಬಾಷೆಲ್ ಮಿಷನ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ನ ವಿವಿಧ ಮುಖಂಡರು ಉಪಸ್ಥಿತರಿದ್ದರು.


Spread the love