Home Mangalorean News Kannada News ನೇತ್ರಾವತಿ ಸೇತುವೆ ಮೇಲೆ ಕೊಡೆಯಿಟ್ಟು ನದಿಗೆ ಹಾರಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ನೇತ್ರಾವತಿ ಸೇತುವೆ ಮೇಲೆ ಕೊಡೆಯಿಟ್ಟು ನದಿಗೆ ಹಾರಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

Spread the love
RedditLinkedinYoutubeEmailFacebook MessengerTelegramWhatsapp

ನೇತ್ರಾವತಿ ಸೇತುವೆ ಮೇಲೆ ಕೊಡೆಯಿಟ್ಟು ನದಿಗೆ ಹಾರಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಕೆಲವು ದಿನಗಳ ಹಿಂದೆ ನೇತ್ರಾವತಿ ಸೇತುವೆ ಮೇಲೆ ಕೊಡೆಯಿಟ್ಟು ನದಿಗೆ ಹಾರಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಜೆಪ್ಪು ಪಟ್ಲ ಬಳಿ ಬುಧವಾರ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಹರೇಕಳ ನಿವಾಸಿ ಕಿಶೋರ್ ಅಡ್ಯಂತಾಯ(36) ಎಂದು ಗುರುತಿಸಲಾಗಿದೆ.

ಜುಲೈ 4 ರಂದು ಕಿಶೋರ್ ಅವರು ತಮ್ಮ ಕೊಡೆಯನ್ನು ನೇತ್ರಾವತಿ ಸೇತುವೆಯ ಮೇಲಿಟ್ಟು ನಾಪತ್ತೆಯಾಗಿದ್ದರು. ಎರಡು ದಿನಗಳ ಬಳಿಕ ಅವರು ನಾಪತ್ತೆಯಾಗಿರುವು ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರನ್ನು ಸ್ವೀಕರಿಸಿದ ಪೊಲೀಸರು ಕಿಶೋರ್ ಅವರ ಹುಡುಕಾಟ ಆರಂಭಿಸಿದ್ದು, ಬುಧವಾರ ಅವರ ಮೃತದೇ ಜೆಪ್ಪು ಪಟ್ಣ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನೇತ್ರಾವತಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವ ನಿಟ್ಟಿನಲ್ಲಿ ಸೇತುವೆಗೆ ಬೇಲಿ ಹಾಕುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಶಿಲನ್ಯಾಸ ನೆರವೇರಿಸಿದ ದಿನ ಸೇತುವೆ ಮೇಲೆ ಕೊಡೆ ಪತ್ತೆಯಾಗಿತ್ತು.


Spread the love
RedditLinkedinYoutubeEmailFacebook MessengerTelegramWhatsapp

Exit mobile version