Home Mangalorean News Kannada News ಪ್ರಧಾನಿ ಮೋದಿ ರಾತ್ರಿ ನಿರ್ಧಾರ ಮಾಡಿ ಬೆಳಿಗ್ಗೆ ಬ್ಯಾಂಕ್ ವಿಲೀನ ಘೋಷಣೆ ಮಾಡಿದ್ದಾರೆ – ವೀರಪ್ಪ...

ಪ್ರಧಾನಿ ಮೋದಿ ರಾತ್ರಿ ನಿರ್ಧಾರ ಮಾಡಿ ಬೆಳಿಗ್ಗೆ ಬ್ಯಾಂಕ್ ವಿಲೀನ ಘೋಷಣೆ ಮಾಡಿದ್ದಾರೆ – ವೀರಪ್ಪ ಮೊಯ್ಲಿ

Spread the love

ಪ್ರಧಾನಿ ಮೋದಿ ರಾತ್ರಿ ನಿರ್ಧಾರ ಮಾಡಿ ಬೆಳಿಗ್ಗೆ ಬ್ಯಾಂಕ್ ವಿಲೀನ ಘೋಷಣೆ ಮಾಡಿದ್ದಾರೆ – ವೀರಪ್ಪ ಮೊಯ್ಲಿ

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬ್ಯಾಂಕ್ ವಿಲೀನ ವಿಚಾರದಲ್ಲಿ ರಾತ್ರಿ ನಿರ್ಧಾರ ಮಾಡಿ ಬೆಳಿಗ್ಗೆ ಘೋಷಣೆ ಮಾಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದರು.

ಅವರು ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಬ್ಯಾಂಕ್ ವಿಲೀನ ಪ್ರಕ್ರಿಯೆ ಒಂದು ಆರ್ಥಿಕ ತುರ್ತು ಪರಿಸ್ಥಿತಿ ಎಂದ ಅವರು ಬ್ಯಾಂಕ್ ವಿಲೀನ ಪ್ರಧಾನಿ ಮೋದಿಯ ಆತುರದ ನಿರ್ಧಾರ ಎಂದ ಅವರು, ಪ್ರತಿಯೊಂದನ್ನೂ ರಾತ್ರಿ ನಿರ್ಧಾರ ಮಾಡಿ , ಬೆಳಿಗ್ಗೆ ಘೋಷಣೆ ಮಾಡುತ್ತಾರೆ. ಕಾಶ್ಮೀರ ವಿಚಾರದಲ್ಲೂ ಪ್ರಧಾನಿ ಆತುರದ ನಿರ್ಧಾರ ಮಾಡಿದ್ದಾರೆ. ದ.ಕ ಜಿಲ್ಲೆ ಬ್ಯಾಂಕ್ ಗಳ ತೊಟ್ಟಿಲು ಅವಿಭಜಿತ ಜಿಲ್ಲೆಗಳು ನಾಲ್ಕು ಬ್ಯಾಂಕ್ ಗಳ ತವರು ಆಗಿದ್ದು ಹಿಂದೆ ವಿಜಯ ಬ್ಯಾಂಕ್ ವಿಲೀನ ಆಯ್ತು.ಈಗ ಕೆನರಾ, ಸಿಂಡಿಕೇಟ್ ಕಾರ್ಪೋರೇಷನ್ ಬ್ಯಾಂಕ್ ಸರದಿ.

ಬ್ಯಾಂಕ್ ವಿಲೀನದ ಸಾಧಕ ಬಾಧಕ ಚರ್ಚೆಯನ್ನೇ ಮಾಡಿಲ್ಲ. ಈ ಎಲ್ಲಾ ಬ್ಯಾಂಕ್ ಗಳಿಗೂ ಒಂದು ಅಸ್ಮಿತೆ ಇದೆ. ಬಡ ಜನರಿಗೆ ಸೇವೆ ಕೊಡುವ ಉದ್ದೇಶದಿಂದ ಆರಂಭವಾದ ಬ್ಯಾಂಕುಗಳು .ಜನರಿಂದ ಬ್ಯಾಂಕ್ ಗಳನ್ನು ದೂರ ಕೊಂಡೊಯ್ಯಲಾಗುತ್ತಿದೆ. ವಿಲೀನ ಮಾಡುವ ಮೂಲಕ ದೊಡ್ಡ ಬ್ಯಾಂಕ್ ಮಾಡುತ್ತೇವೆ ಅಂತಾರೆ. ಈ ಬ್ಯಾಂಕ್ಗಳು ಇನ್ನು ಹಳ್ಳಿಗರಿಗೆ ತಲುಪಲ್ಲ. ದೊಡ್ಡ ಉದ್ಯಮಿಗಳಿಗೆ ಸಾಲ ಕೊಡಲು ದೊಡ್ಡ ಬ್ಯಾಂಕ್ ಮಾಡಿದಾರೆ ಅಷ್ಟೆ. ಮುಂದೆ ನಮ್ಮ ಬ್ಯಾಂಕ್ ಗಳನ್ನು ಹೊರದೇಶದ ಬ್ಯಾಂಕ್ ಗಳಿಗೆ ವಿಲೀನ ಮಾಡ್ತಾರೆ ಎಂದರು.

 ರಿಸರ್ವ್ ಬ್ಯಾಂಕ್ ದೇಶದ ಆರ್ಥಿಕತೆಯ ಬುನಾದಿ ಆದರೆ ಇಂದು ಅದೇ ಬ್ಯಾಂಕಿನ ರಿಸರ್ವ್ ಫಂಡ್ ನ್ನೇ ಕೇಂದ್ರ ಪಡೆದಿದೆ. ಆರ್ಥಿಕ ತುರ್ತುಪರಿಸ್ಥಿತಿ ಇದ್ದಾಗ ಮಾತ್ರ ಹೀಗೆ ಮಾಡ್ತಾರೆ. ಈಗ ದೇಶದಲ್ಲಿ ಅಘೊಷಿತ ಆರ್ಥಿಕ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳು ಗಟ್ಟಿಯಾಗಿಲ್ಲ ಅಂತ ಕೇಂದ್ರ ಸರ್ಕಾರ ಹೀಗೆಲ್ಲಾ ಮಾಡುತ್ತಿದೆ .ಆದರೆ ದೇಶದ ಅಭಿವೃದ್ದಿಗೆ ಈ ಧೋರಣೆಯೇ ಮಾರಕ ಎಂದ ಮೊಯ್ಲಿ,ಕೇಂದ್ರದ ವೈಫಲ್ಯ ಜನರಿಗೆ ತಲುಪಿಸಲು ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕು.

ಸಕ್ರಿಯ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ ಮುಂದಾಗಬೇಕು.ಇದು ಕಾಂಗ್ರೆಸ್ ನ ರಾಷ್ಟ್ರೀಯ ಕರ್ತವ್ಯವೂ ಹೌದು.ಇ ಡಿ ಮೂಲಕ ಹೆದರಿಸುವ ಕೆಲಸ ಈಗ ಆಗ್ತಿದೆ.ಚಿದಂಬರಂ ಅವರನ್ನು ಒಳಗೆ ಹಾಕಿದಾರೆ.ಇನ್ನು ಡಿಕೆಶಿಯನ್ನೂ ಒಳಗೆ ಹಾಕ್ತಾರೆ.ಆದರೆ ಪ್ರಜಾಪ್ರಭುತ್ವ ಹಿತರಕ್ಷಣೆಗೆ ಕಾಂಗ್ರೆಸ್ ನಾಯಕರು ಹೆದರಬಾರದು ಎಂದರು.

ರಾಜ್ಯದಲ್ಲಿ ಪ್ರವಾಹದಿಂದ ಆಗಿರುವ ನಷ್ಟ ಐವತ್ತು ಸಾವಿರ ಕೋಟಿ ಅಲ್ಲ, ಸುಮಾರು 5 ಲಕ್ಷ ಕೋಟಿಯಷ್ಟು ನಷ್ಟವಾಗಿದೆ. ಐಎಎಸ್ ಅಧಿಕಾರಿಗಳ ನಿಯೋಗ ಬಂದು ಅಧ್ಯಯನ ನಡೆಸಿದರೆ ಪ್ರಯೋಜನ ಇಲ್ಲ.ತಜ್ಞರ ಸಮಿತಿ ಮಾಡಬೇಕು.ಇವತ್ತಿನ ವರೆಗೆ ಕೇಂದ್ರ ಸರಕಾರ ನಯಾಪೈಸೆ ಬಿಡುಗಡೆ ಹಣವನ್ನೂ ಬಿಡುಗಡೆ ಮಾಡಿಲ್ಲ. ಪ್ರಧಾನಿಯವರು ಸಪ್ಟೆಂಬರ್ 7 ಕ್ಕೆ ಬರುವ ಮಾಹಿತಿ ಇದ್ದು ಅವರು ಬಂದು ಘೋಷಣೆ ಮಾಡಬೇಕು ಅಂತ ಏನಿದೆ? ಎಂದು ಪ್ರಶ್ನೆ ಮಾಡಿರುವ ಮಾಜಿ ಸಿಎಂ ವೀರಪ್ಪ ಮೊಯಿಲಿ,ಪರಿಹಾರ ಘೋಷಣೆಗೆ ಕಾಯುವುದು ಸರಿಯಲ್ಲ. ಗೃಹ ಸಚಿವರು ರಾಷ್ಟ್ರೀಯ ವಿಪತ್ತು ಸಮಿತಿಯ ಅಧ್ಯಕ್ಷನೂ ಆಗಿದ್ದಾರೆ ಹಾಗಿದ್ರೂ ಪರಿಹಾರ ಘೋಷಣೆ ಮಾಡಲು ವಿಳಂಬ ಯಾಕೆ? ಕೇಂದ್ರ ಮತ್ತು ರಾಜ್ಯ ಸರಕಾರ ಪ್ರವಾಹವನ್ನು ಕ್ಯಾಸ್ಯುವಲ್ ಆಗಿ ತಗೊಂಡಿದಾರೆ. ರಾಜ್ಯದಲ್ಲೂ ಸಿಎಂ ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರನ್ನು ವಿಶ್ವಾಸ ಪಡೆದಿಲ್ಲ ಎಂದರು.


Spread the love

Exit mobile version