ಫೆ. 22ರಂದು ಸಚಿವ ಪ್ರಿಯಾಂಕ್ ಖರ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ

Spread the love

ಫೆ. 22ರಂದು ಸಚಿವ ಪ್ರಿಯಾಂಕ್ ಖರ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ

ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಫೆಬ್ರವರಿ 22ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 10:15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 10:30 ಗಂಟೆಗೆ ನಗರದ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಗ್ರಾಮಸ್ವರಾಜ್ ಪ್ರತಿಷ್ಠಾನ ವತಿಯಿಂದ ಹೊಂಬೆಳಕು-2025, “ಸ್ಥಳೀಯಾಡಳಿತದ ಸಂಭ್ರಮ” ಕಾರ್ಯಕ್ರಮದಲ್ಲಿ ಭಾಗವಹಿಸುವರು,

12:30 ಗಂಟೆಗೆ ಸಹ್ಯಾದ್ರಿ ಸ್ಟಾರ್ಟ್ ಅಪ್ ಫೆಸಿಲಿಟಿಗೆ ಭೇಟಿ ಹಾಗೂ ವಾಣಿಜ್ಯೋದ್ಯಮಿ ವಿದ್ಯಾರ್ಥಿಗಳೊಂದಿಗೆ ಸಂವಾದ, ಮಧ್ಯಾಹ್ನ 2 ಗಂಟೆಗೆ ಸಸಿಹಿತ್ಲು ಸಮುದ್ರ ತೀರ ಭೇಟಿ, ಸಂಜೆ 4:45 ಗಂಟೆಗೆ ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments