Home Mangalorean News Kannada News ಫೆ. 9, 10 ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ ಮತ್ತು ಉಡುಪಿ ಜಿಲ್ಲಾ...

ಫೆ. 9, 10 ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ ಮತ್ತು ಉಡುಪಿ ಜಿಲ್ಲಾ ಪ್ರವಾಸ

Spread the love

ಫೆ. 9, 10 ರಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ ಮತ್ತು ಉಡುಪಿ ಜಿಲ್ಲಾ ಪ್ರವಾಸ

ಮಂಗಳೂರು: ಫೆಬ್ರವರಿ 9 ಮತ್ತು 10 ರಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ದಕ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಶುಕ್ರವಾರ ಬೆಳಿಗ್ಗೆ ಮಂಗಳೂರಿಗೆ ಆಗಮಿಸುವ ಸಚಿವರು 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು ಬಳಿಕ ರಾತ್ರಿ 8 ಗಂಟೆಗೆ ಉಡುಪಿಗೆ ತೆರಳುವರು.

ಫೆಬ್ರವರಿ 10 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ ಮೈಸೂರು ಇದರ ಔಟ್ ರೀಚ್ ಸರ್ವಿಸ್ ಸೆಂಟರ್ ಹಾಗೂ ನೂತನ ಡಯಾಲಿಸಿಸ್ ಘಟಕವನ್ನು ಕುಂದಾಪುರ ಉಪವಿಭಾಗಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಉದ್ಘಾಟಿಸಲಿದ್ದು 11 ಗಂಟೆಗೆ ಕೋಟೇಶ್ವರ ಸಹನಾ ಕನ್ವೆನ್ಷನ್ ಸೆಂಟರ್ ಇಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನೂತನ ಡಯಾಲಿಸೀಸ್ ಘಟಕಗಳನ್ನು ಲೋಕಾರ್ಪಣೆಗೊಳಿಸಲಿದ್ದು ಬಳಿಕ 2.30ಕ್ಕೆ ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯ್ ಸಭಾಂಗಣದಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿ ಬಳಿ ಮಂಗಳೂರಿಗೆ ನಿರ್ಗಮಿಸಲಿದ್ದು ಸಂಜೆ 5.30ಕ್ಕೆ ತಣ್ಣಿರು ಬಾವಿಯಲ್ಲಿ ಗಾಳಿಪಟ ಉತ್ಸವದಲ್ಲಿ ಭಾಗಿಯಾಗಿ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ


Spread the love

Exit mobile version