ಬೆಂಗಳೂರು ನಗರದ ಮೇಲೆ ಪಾಕ್​ ಉಗ್ರರ ದಾಳಿ ಭೀತಿ: ಉಡುಪಿ ಮಂಗಳೂರಿನಲ್ಲಿ ಪೊಲೀಸರಿಂದ ಶೋಧ

Spread the love

ಬೆಂಗಳೂರು ನಗರದ ಮೇಲೆ ಪಾಕ್​ ಉಗ್ರರ ದಾಳಿ ಭೀತಿ: ಉಡುಪಿ ಮಂಗಳೂರಿನಲ್ಲಿ ಪೊಲೀಸರಿಂದ ಶೋಧ

ಬೆಂಗಳೂರು ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಬೇಹುಗಾರಿಕಾ ಪಡೆಗಳಿಂದ ಮಾಹಿತಿ ಲಭಿಸಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಹಾಗೂ ಮಂಗಳೂರಿನಲ್ಲಿ ಕೂಡ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

 ಮಂಗಳೂರು ನಗರದ ವಿವಿಧ ಆಸ್ಪತ್ರೆ, ಮಾಲ್,  ಐಟಿ ಕಂಪೆನಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ  ಪೊಲೀಸರು ತಪಾಸಣೆ ನಡೆಸಿದ್ದಾರೆ.  ಶ್ವಾನದಳ, ಬಾಂಬ್ ಸ್ಕ್ವಾಡ್ ಬಳಸಿಕೊಂಡು ಪೊಲೀಸರಿಂದ ಶೋಧ ಕಾರ್ಯ ನಡೆಸಿದ್ದು, ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love