Home Mangalorean News Kannada News ಭಾರೀ ಮಳೆ: ಬೈಂದೂರು ಶಿಕ್ಷಣ ವಲಯ ವ್ಯಾಪ್ತಿ ಶಾಲೆಗಳಿಗೆ ಇಂದು (ಜು.4) ರಜೆ ಘೋಷಣೆ

ಭಾರೀ ಮಳೆ: ಬೈಂದೂರು ಶಿಕ್ಷಣ ವಲಯ ವ್ಯಾಪ್ತಿ ಶಾಲೆಗಳಿಗೆ ಇಂದು (ಜು.4) ರಜೆ ಘೋಷಣೆ

Spread the love

ಭಾರೀ ಮಳೆ: ಬೈಂದೂರು ಶಿಕ್ಷಣ ವಲಯ ವ್ಯಾಪ್ತಿ ಶಾಲೆಗಳಿಗೆ ಇಂದು (ಜು.4) ರಜೆ ಘೋಷಣೆ

ಬೈಂದೂರು: ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ವಲಯ ವ್ಯಾಪ್ತಿ ಭಾಗದ ಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಿಕ್ಷಣ ವಲಯ ವ್ಯಾಪ್ತಿಯ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಇಡೀ ಬೈಂದೂರು ತಾಲೂಕಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಮಾಹಿತಿ ನೀಡಿದ್ದಾರೆ.

ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.


Spread the love

Exit mobile version