ಮಂಗಳೂರು: ಕೊಂಕಣಿ ಮಾನ್ಯತಾ ದಿವಸ್ ಆಚರಣೆ

Spread the love

ಮಂಗಳೂರು: ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಆಕಾಡೆಮಿ ಹಾಗೂ ಕೊಂಕಣಿ ಭಾಷಾ ಮಂಡಳಿ ಕರ್ನಾಟಕ ಇದರ ಸಹಬಾಗಿತ್ವದಲ್ಲಿ ಮಂಗಳೂರು ನಗರದ ಪುರಭವನದಲ್ಲಿ ಕೊಂಕಣಿ ಮಾನ್ಯತಾ ದಿವಸವನ್ನು ಆಚರಿಸಲಾಯಿತು.

 ಕರ್ನಾಟಕ ಕೊಂಕಣಿ ಸಾಹಿತ್ಯ ಆಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀಯುತ ರೊಯ್  ಕ್ಯಾಸ್ತೆಲಿನೊ ರವರು ಕೊಂಕಣಿ ಬಾವುಟವನ್ನು ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ   ಜೋಕಿಂ ಸ್ಟ್ಯಾನಿ ಆಲ್ವಾರಿಸ್,ಕೊಂಕಣಿ ಭಾಷಾ ಮಂಡಲ ಕರ್ನಾಟಕ ಇದರ ಅಧ್ಯಕ್ಷರಾದ   ವಸಂತ ರಾವ್, ಕಾರ್ಯದರ್ಶಿ ರೇಮಂಡ್ ಡಿಕುನ್ಹ ಹಾಗೂ ಅಕಾಡೆಮಿಯ ಸದಸ್ಯರುಗಳಾದ ನವೀನ್ ಲೋಬೊ, ಸಮರ್ಥ್ ಭಟ್, ರೋನಾಲ್ಡ್ ಕ್ರಾಸ್ತಾ,ಸುನಿಲ್ ಸಿದ್ದಿ, ದಯಾನಂದ ಮಡ್ಕೆಕರ್, ಪ್ರಮೋದ್ ಪಿಂಟೋ,ಜೇಮ್ಸ್ ಲೋಫೀಸ್,   ಸಪ್ನಾ  ಕ್ರಾಸ್ತಾ ,  ಅಕ್ಷತಾ ನಾಯಕ್ ಉಪಸ್ಥಿತರಿದ್ದರು.

ಕೊಂಕಣಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ವಿನೋದವಳಿ ಸ್ಪರ್ಧೆಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದ ಕಾಣಿಸಿದರು.


Spread the love