ಮಂಗಳೂರು: ಗಣಿ ಇಲಾಖೆ ಅಧಿಕಾರಿಗೆ ಶೋಕಾಸ್ ನೋಟೀಸ್

Spread the love

ಮಂಗಳೂರು: ಗಣಿ ಇಲಾಖೆ ಅಧಿಕಾರಿಗೆ ಶೋಕಾಸ್ ನೋಟೀಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಅವರಿಗೆ ಇಲಾಖೆಯ ನಿರ್ದೇಶಕರು ಶೋಕಾಸ್ ನೋಟೀಸ್ ನೀಡಿದ್ದಾರೆ.

ಫೆಬ್ರವರಿ 5 ರಂದು ಬಂಟ್ವಾಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಡೆಸಿದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕ ದೂರಿಗೆ ಸ್ಪಂದಿಸುವ ಸಂದರ್ಭದಲ್ಲಿ ಗಣಿ ಇಲಾಖೆ ಅಧಿಕಾರಿಯು ಯಾವುದೇ ಪೂರ್ವಾನುಮತಿ ಇಲ್ಲದೆ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಶಿಸ್ತುಕ್ರಮಕ್ಕೆ ಸಚಿವರು ಸೂಚಿಸಿದ್ದರು.

ಅದರಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕರು, ಕರ್ನಾಟಕ ನಾಗರೀಕ ಸೇವಾ ನಿಯಮಗಳನ್ವಯ ಶಿಸ್ತುಕ್ರಮ ಜರುಗಿಸಲು ಸರಕಾರಕ್ಕೆ ಏಕೆ ಶಿಫಾರಸ್ಸು ಮಾಡಬಾರದೆಂದು, ಮೂರು ದಿನಗಳಲ್ಲಿ ವಿವರಣೆ ನೀಡಲು ಎಂದು ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಅವರಿಗೆ ಸೂಚಿಸಿದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ನೋಟೀಸಿನಲ್ಲಿ ತಿಳಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments