Home Mangalorean News Kannada News ಮುಗಿದ ಗಡುವು: ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

ಮುಗಿದ ಗಡುವು: ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Spread the love

ಮುಗಿದ ಗಡುವು: ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

ಉಡುಪಿ: ಉಡುಪಿ ಸಂಚಾರ ಪೊಲೀಸರು ನೀಡಿರುವ ಗಡುವು ಮುಗಿದ ಹಿನ್ನೆಲೆಯಲ್ಲಿ ಇಂದು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್ಗಳ ಕರ್ಕಶ ಹಾನ್ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು.

ಜೂ.3ರಂದು ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಉಡುಪಿ ಸಿಟಿ ಬಸ್ ಮಾಲಕರು ಮತ್ತು ಸರ್ವಿಸ್ ಬಸ್ ಮಾಲಕರ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್ಗಳನ್ನು ಜೂ.15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಯಿತು.

ಅದರಂತೆ ಗಡುವು ಮುಗಿದ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಏಳು ಬಸ್ಗಳಲ್ಲಿದ್ದ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಲಾಯಿತು. ಬಸ್ಗಳ ವಿರುದ್ಧ ತಲಾ 500ರೂ.ನಂತೆ ಒಟ್ಟು 3500ರೂ. ದಂಡ ವಿಧಿಸಲಾಯಿತು. ಎರಡನೇ ಬಾರಿಗೆ 1000ರೂ. ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ.

ಈಗಾಗಲೇ ಗಡುವು ನೀಡಿರುವ ಹಿನ್ನೆಲೆಯಲ್ಲಿ ಬಹುತೇಕ ಸಿಟಿಬಸ್ಗಳು ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಿದೆ.  ಆದುದರಿಂದ ಈ ಕಾರ್ಯಾ ಚರಣೆ  ಮತ್ತೆ ಮುಂದುವರೆಯಲಿದೆ. ಮುಂದೆ ಸರ್ವಿಸ್ ಬಸ್ಗಳ ವಿರುದ್ಧವೂ ಕಾರ್ಯಚರಣೆ ನಡೆಸಲಾ ಗುವುದು ಎಂದು ಎಸ್ಸೈ ಸುದರ್ಶನ್ ತಿಳಿಸಿದ್ದಾರೆ.


Spread the love

Exit mobile version