Home Mangalorean News Kannada News ಮುಸುಕುಧಾರಿಗಳಿಂದ ಕಳ್ಳತನಕ್ಕೆ ಯತ್ನ – ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ : ಎಸ್ಪಿ ಡಾ....

ಮುಸುಕುಧಾರಿಗಳಿಂದ ಕಳ್ಳತನಕ್ಕೆ ಯತ್ನ – ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ : ಎಸ್ಪಿ ಡಾ. ಅರುಣ್ ಕೆ

Spread the love

ಮುಸುಕುಧಾರಿಗಳಿಂದ ಕಳ್ಳತನಕ್ಕೆ ಯತ್ನ – ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ : ಎಸ್ಪಿ ಡಾ. ಅರುಣ್ ಕೆ

ಉಡುಪಿ: ನಾಲ್ವರು ಮುಸುಕುಧಾರಿಗಳು ನಗರದ ಅಪಾರ್ಟ್ ಮೆಂಟ್ ನ ಫ್ಲ್ಯಾಟ್ ವೊಂದಕ್ಕೆ ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ವಾಪಸ್ಸಾಗಿರುವ ಘಟನೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಅವರು ತಿಳಿಸಿದ್ದಾರೆ.

ಉಡುಪಿಯ ಬ್ರಹ್ಮಗಿರಿಯಲ್ಲಿ ಇರುವ ನಿಖಿ ಅಪಾರ್ಟ್ ಮೆಂಟ್ ನ ನಿವಾಸಿ ಪುರುಷೋತ್ತಮ ಅಮೀನ್ ಎಂಬವರು ಮನೆಯಲ್ಲಿ ಇಲ್ಲದ ಸಮಯದಲ್ಲಿ ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ನಾಲ್ವರು ಕೂಡಾ ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲ್ಯಾಟ್ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ. ಈ ಬಗ್ಗೆ ಅಪಾರ್ಟ್ ಮೆಂಟ್ ಅಧ್ಯಕ್ಷರಾದ ಗಾಡ್ವಿನ್ ಕರ್ಕಡ ಅವರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ

ಪ್ರಕರಣದ ತನಿಖೆಗೆ ಇನ್ಸ್ ಪೆಕ್ಟರ್ ನೇತೃತ್ವದ ವಿಶೇಷ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಎಸ್ಪಿಯವರು ತಿಳಿಸಿದ್ದಾರೆ.


Spread the love

Exit mobile version