Home Mangalorean News Kannada News ಮೈಸೂರಿನಲ್ಲಿ ಸ್ವಾಮೀಜಿ ಲೈಂಗಿಕ ಕಿರುಕುಳ ಪ್ರಕರಣ: ಶಿಷ್ಯನ ಬಂಧನ

ಮೈಸೂರಿನಲ್ಲಿ ಸ್ವಾಮೀಜಿ ಲೈಂಗಿಕ ಕಿರುಕುಳ ಪ್ರಕರಣ: ಶಿಷ್ಯನ ಬಂಧನ

Spread the love

ಮೈಸೂರಿನಲ್ಲಿ ಸ್ವಾಮೀಜಿ ಲೈಂಗಿಕ ಕಿರುಕುಳ ಪ್ರಕರಣ: ಶಿಷ್ಯನ ಬಂಧನ

ಮೈಸೂರು: ವಿವಾಹಿತ ಮಹಿಳೆಗೆ ಸ್ವಾಮೀಜಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯ ಶಿಷ್ಯನನ್ನು ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.
ಸ್ವಾಮೀಜಿಯ ಶಿಷ್ಯ ಅನಿಲ್ ಆಚಾರ್ಯನೇ ಬಂಧಿತ ಆರೋಪಿ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈತನನ್ನು ಬಂಧಿಸಲಾಗಿದೆ.

ಸೆಪ್ಟೆಂಬರ್.4ರಂದು ಈ ಘಟನೆ ನಡೆದಿದ್ದು ಸ್ವಾಮೀಜಿ, ಆಕೆಯ ಪತಿ ಹಾಗೂ ಇತರ 5 ಮಂದಿ ಕಿರುಕುಳ ನೀಡಿದ್ದರೆಂದು ಗೃಹಿಣಿ ಆರೋಪಿಸಿದ್ದರು. ಈ ಬಗ್ಗೆ ಸೆಪ್ಟೆಂಬರ್ 7ರಂದು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ದಿನದಿಂದ ಸ್ವಾಮೀಜಿ ಹಾಗೂ ಮಹಿಳೆ ಪತಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ವೇಳೆ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯ ಸಹ ಇದ್ದರು. ಸದ್ಯ ಸಂತ್ರಸ್ತೆ ಅನಿಲ್ ಆಚಾರ್ಯರನ್ನು ಗುರುತಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.


Spread the love

Exit mobile version