ಯಡಿಯೂರಪ್ಪನವರ ಕುಟುಂಬ ರಾಜಕಾರಣ ಕೊನೆಗಾಣಿಸುವ ತನಕ ವಿರಮಿಸುವುದಿಲ್ಲ – ಕೆ. ಎಸ್. ಈಶ್ವರಪ್ಪ

Spread the love

ಯಡಿಯೂರಪ್ಪನವರ ಕುಟುಂಬ ರಾಜಕಾರಣ ಕೊನೆಗಾಣಿಸುವ ತನಕ ವಿರಮಿಸುವುದಿಲ್ಲ – ಕೆ. ಎಸ್. ಈಶ್ವರಪ್ಪ

ಕುಂದಾಪುರ: ಕೇಂದ್ರದಲ್ಲಿ ಕಾಂಗ್ರೆಸ್ ಕುಟುಂಬ ರಾಜಕಾರಣದ ವಿರುದ್ದ ಪ್ರಧಾನಿ ನರೇಂದ್ರ ಮೋದಿಯವರು ಹೇಗೆ ಸಿಡಿದು ನಿಂತಿದ್ದಾರೋ ಹಾಗೆಯೇ ರಾಜ್ಯ ಬಿಜೆಪಿ ಕುಟುಂಬ ರಾಜಕಾರಣದ ವಿರುದ್ದ ನನ್ನ ಹೋರಾಟ. ಪ್ರಧಾನಿಯವರ ಹಾದಿಯಲ್ಲೇ ಸಾಗುತ್ತಿರುವ ನಾನು ಬಿಜೆಪಿಯಲ್ಲಿನ ಯಡಿಯೂರಪ್ಪನವರ ಕುಟುಂಬ ರಾಜಕಾರಣ ಕೊನೆಗಾಣಿಸುವ ತನಕ ವಿರಮಿಸುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಗುಡುಗಿದ್ದಾರೆ.

.

ಅವರು ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನ ಉಪುö್ಪಂದದ ದೇವಕಿ ಸಭಾಭವನದಲ್ಲಿ ರಾಷ್ಟç ಭಕ್ತ ಬಳಗ ವತಿಯಿಂದ ಆಯೋಜಿಸಲಾಗಿದ್ದ ಬೈಂದೂರು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಹಿಂದುತ್ವಕ್ಕಾಗಿ ತಮ್ಮ ಪ್ರಾಣವನ್ಙೇ ಕೊಡಲು ಸಿದ್ಧವಾಗಿದ್ದ ಬಿಜೆಪಿಯ ಅಪ್ಪಟ ಹಿಂದೂ ಕಾರ್ಯಕರ್ತರಿಗೆ ನಿರಂತರವಾಗಿ ವಂಚಿಸಲಾಗುತ್ತಿದೆ. ರಾಜ್ಯದಲ್ಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕೀಯದ ಮೂಲಕ ತನ್ನ ಕುಟುಂಬ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸಂಘಟನೆಗೆ ಯಡಿಯೂರಪ್ಪನವರಷ್ಟೇ ಈ ಈಶ್ವರಪ್ಪನೂ ಕೆಲಸ ಮಾಡಿದ್ದಾನೆ ಎನ್ನುವುದನ್ನು ಯಾವ ಕಾರ್ಯಕರ್ತರೂ ಮರೆತಿಲ್ಲ. ನನ್ನ ಹೋರಾಟ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದ ವಿರುದ್ದ ಅಲ್ಲ. ಕೇವಲ ತಮ್ಮ ಸ್ವಾರ್ಥ ರಾಜಕೀಯ, ಕುಟುಂಬ ರಾಜಕೀಯವನ್ನೇ ಮಾಡಿಕೊಂಡು ಬಂದಿರುವ ಯಡಿಯೂರಪ್ಪನವರ ವಿರುದ್ಧ ನನ್ನ ಈ ಹೋರಾಟ ಎಂದರು.

ಈ ಚುನಾವಣೆ ಕೇವಲ ಚುನಾವಣೆಯಲ್ಲ. ಇದು ಯಡಿಯೂರಪ್ಪನವರ ಹಣ ಬಲ ಮತ್ತು ಹಿಂದೂತ್ವ, ಕಾರ್ಯಕರ್ತರ ನಡುವಿನ ಸಮರ. ರಾಜಕೀಯ ಜೀವನದಲ್ಲಿ ನಾನು ಯಾವತ್ತೂ ಹೊಂದಾಣಿಕೆ ಮಾಡಿಕೊಂಡಿಲ್ಲ. ಹಿಂದೂತ್ವವನ್ನು ನನ್ನ ಉಸಿರಾಗಿಸಿಕೊಂಡು ಪಕ್ಷ, ಸಂಘಟನೆ ಮಾಡಿದ್ದೇನೆ. ನಾಯಕರ ಒತ್ತಡಕ್ಕೆ ಮಣಿದು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಕೈಬಿಟ್ಟಿದ್ದು ನಾನು ಮಾಡಿದ ಮೊದಲ ತಪುö್ಪ. ಹಿಂದೂತ್ವವನ್ನು ಒಪ್ಪಿಕೊಂಡಿರುವ ಕಾರ್ಯಕರ್ತರು ನನ್ನ ಜೊತೆಗಿದ್ದಾರೆ. ಕನಿಷ್ಟ ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವೆ. ನಾನು ಯಾವತ್ತೂ ಕಾರ್ಯಕರ್ತರ ಜೊತೆಗಿರುವೆ ಎಂದ ಅವರು, ಕಾರ್ಯಕರ್ತರೂ ನನ್ನ ಕೈಬಿಡುವುದಿಲ್ಲ ಎಂದರು.

ಚುನಾವಣೆಗೆ ಮುನ್ನ ನಾನು ಏನೂ ಆಶ್ವಾಸನೆ ಕೊಡಲ್ಲ. ಗೆದ್ದ ಬಳಿಕ ಕೆಲಸ ಮಾಡಿ ತೋರಿಸುವೆ. ಸಂಸದನಾದ ಬಳಿಕ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುತ್ತೇನೆ ಎಂದರು.

ರಾಘವೇಂದ್ರಗೆ ಸೋಲು, ವಿಜಯೇಂದ್ರ ರಾಜೀನಾಮೆ!: ಈಶ್ವರಪ್ಪ ಭವಿಷ್ಯ
ಹಿಂದೂತ್ವ, ರಾಮ ಮಂದಿರ, ಗೋರಕ್ಷಣೆಯ ಕುರಿತು ಮಾತನಾಡುವ ನಾಯಕರನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ. ಸಿಟಿ ರವಿ, ಸದಾನಂದ ಗೌಡ, ಯತ್ನಾಳ್, ಪ್ರತಾಪ್ ಸಿಂಹ, ಅನಂತ ಕುಮಾರ್ ಹೆಗ್ಡೆಯವರಿಗೆ ಮೋಸ ಮಾಡಿದ್ದಾರೆ. ಪಕ್ಷ, ಸಂಘಟನೆಗಾಗಿ ಇಡೀ ದೇಶ ಸುತ್ತಿದರೂ ಸಿಟಿ ರವಿ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ನೀಡಿಲ್ಲ. ಇದರÀ ವಿರುದ್ದ ನನ್ನ ಹೋರಾಟ. ಸಂಸದನಾಗಿ ಆಯ್ಕೆಯಾಗಿ ಮೋದಿಯವರನ್ನು ಪ್ರಧಾನಿ ಮಾಡಲು ಕೈ ಎತ್ತುವೆ. ಯಡಿಯೂಪ್ಪನವರ ದುಡ್ಡನ್ನು ಮೀರಿ ಲೋಕಸಭೆಗೆ ಹೋಗುತ್ತೇನೆ. ಯಡಿಯೂರಪ್ಪನವರಿಗೆ ಬಿಜೆಪಿ ೨೮ ಸೀಟು ಗೆಲ್ಲುವುದು ಮುಖ್ಯವಲ್ಲ, ವಿಜಯೇಂದ್ರ ಅವರನ್ನು ಸಿಎಂ ಮಾಡುವುದು ಅವರಿಗೆ ಮುಖ್ಯವಾಗಿದೆ. ಈ ಚುನಾವಣೆಯಲ್ಲಿ ರಾಘವೇಂದ್ರ ಅವರಿಗೆ ಸೋಲಾಗುತ್ತದೆ. ಆ ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ವೇದಿಕೆಯಲ್ಲಿ ರಾಷ್ಟçಭಕ್ತ ಬಳಗ ಬೈಂದೂರು ಇದರ ಮುಖಂಡರಾದ ಶ್ರೀಧರ ಬಿಜೂರು, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಗೋಪಾಲ ನಾಡ, ಸುವರ್ಣ ಪೂಜಾರಿ, ಈಶ್ವರಪ್ಪ ಪುತ್ರ ಕಾಂತೇಶ್, ಮೀನುಗಾರ ಮುಖಂಡ ಯಶವಂತ್ ಗಂಗೊಳ್ಳಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ನಾರಾಯಣ ಪೂಜಾರಿ, ಪಟ್ಟಣ ಪಂಚಾಯತ್ ಸದಸ್ಯ ಗಣೇಶ್ ರಾವ್, ಗೋಪಾಲ ಗಾಣಿಗ, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.


Spread the love