Home Mangalorean News Kannada News ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ – ಪ್ರಮೋದ್ ಮಧ್ವರಾಜ್

ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ – ಪ್ರಮೋದ್ ಮಧ್ವರಾಜ್

Spread the love

ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ – ಪ್ರಮೋದ್ ಮಧ್ವರಾಜ್

ಉಡುಪಿ: ಶಾಸಕ ರಘುಪತಿ ಭಟ್ ನನ್ನ ರಾಜಕೀಯ ನಡೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿ ಎಂದು ಮಾಜಿ ಶಾಸಕ ಹಾಗೂ ಸಚಿವ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ.

ಅವರು ಉಡುಪಿ ಶಾಸಕ ರಘುಪತಿ ಭಟ್ ಅವರ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಗೇಟ್ ಓಪನ್ ಆಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ರಘುಪತಿ ಭಟ್ ಅನೇಕ ಸುಳ್ಳುಗಳನ್ನು ಹೇಳಿ ಕಳೆದ ಚುನಾವಣೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಗೆದ್ದಿದ್ದಾರೆ ಅವರು ಕೊಟ್ಟ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಪ್ರಮುಖವಾಗಿ ತಾನು ಗೆದ್ದ 10 ದಿನಗಳ ಒಳಗೆ ಮರಳಿನ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದರು

ನಾನು ಶಾಸಕನಾಗಿ ಮಂತ್ರಿಯಾಗಿ ಉಡುಪಿಗೆ ಮಂಜೂರು ಮಾಡಿ ಕಾಮಾಗಾರಿಗಳೇ ಮುಂದುವರೆಯುತ್ತಿವೆ ಹೊರತು ಹೊಸ ಯಾವುದೇ ಕಾಮಗಾರಿಗಳು ಬಂದಿಲ್ಲ. ಕೆಲವೊಂದು ತಾನು ಮಂಜೂರು ಮಾಡಿದ ಕಾಮಾಗಾರಿಗಳಿಗೂ ತಡೆಯೊಡ್ಡುವ ಕೆಲಸವನ್ನು ರಘುಪತಿ ಭಟ್ ಮಾಡಿದ್ದಾರೆ. ಅವರಿಗೆ ನನ್ನ ಸಲಹೆ ಏನೇಂದರೆ ಶಾಸಕನಾಗಿ ಅವರು ಈಗಾಗಲೇ ವಿಫಲವಾಗಿದ್ದಾರೆ ಇನ್ನಾದರೂ ಅವರು ಕ್ಷೇತ್ರದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲಿ. ನನ್ನ ರಾಜಕೀಯ ನಡೆಯ ಬಗ್ಗೆ ರಘುಪತಿ ಭಟ್ ಹೆಚ್ಚು ತಲೆಕೆಡಿಸಿಕೊಳ್ಳೂವುದು ಬೇಡ ಅದರ ಬದಲು ಅವರು ಕ್ಷೇತ್ರದ ಜನತೆಯ ಬಗ್ಗೆ ತಲೆ ಕೆಡಿಸಿಕೊಳ್ಳಲಿದ ಎಂದು ಅವರು ಹೇಳಿದ್ದಾರೆ.


Spread the love

Exit mobile version