Home Mangalorean News Kannada News ರಾಜ್ಯ ಸರಕಾರದ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಆರೋಪ ಮಾಡಿದ್ದಲ್ಲಿ ಕಾರ್ಯಕರ್ತರು ಪ್ರತಿಭಟನೆ ಎಚ್ಚರಿಕೆ ; ಮಟ್ಟಾರ್...

ರಾಜ್ಯ ಸರಕಾರದ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಆರೋಪ ಮಾಡಿದ್ದಲ್ಲಿ ಕಾರ್ಯಕರ್ತರು ಪ್ರತಿಭಟನೆ ಎಚ್ಚರಿಕೆ ; ಮಟ್ಟಾರ್ ಹೆಗ್ಡೆ

Spread the love

ರಾಜ್ಯ ಸರಕಾರದ ಸಮಾವೇಶದಲ್ಲಿ ಬಿಜೆಪಿ ವಿರುದ್ದ ಆರೋಪ ಮಾಡಿದ್ದಲ್ಲಿ ಕಾರ್ಯಕರ್ತರು ಪ್ರತಿಭಟನೆ ಎಚ್ಚರಿಕೆ ; ಮಟ್ಟಾರ್ ಹೆಗ್ಡೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಸಾಧನಾ ಸಮಾವೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಬಿಜೆಪಿ ಪಕ್ಷದ ವಿರುದ್ದ ಸುಳ್ಳು ಆರೋಪಗಳನ್ನು ಮಾಡಿದಲ್ಲಿ ಕಾರ್ಯಕ್ರಮದಲ್ಲೇ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಎಚ್ಚರಿಸಿದ್ದಾರೆ.

ಅವರು ಪಕ್ಷದ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ ಹಾಗೂ ಕಾಪುವಿನಲ್ಲಿ ಜನವರಿ 8 ರಂದು ಮುಖ್ಯಮಂತ್ರಿಗಳು ಭಾಗವಹಿಸುವ ಸಮಾವೇಶಕ್ಕಾಗಿ ಸರಕಾರಿ ಯಂತ್ರವನ್ನು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ.

ಇದು ಸರಕಾರಿ ಪ್ರಾಯೋಜಿತ ಕಾಂಗ್ರೆಸ್ ಕಾರ್ಯಕ್ರಮವಾಗಿದ್ದು ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಪಂ ಪಿಡಿಒ ತನಕ ಸಂಪೂರ್ಣ ಕಾರ್ಯಕ್ರಮದ ಯಶಸ್ಸಿನಲ್ಲಿ ತೊಡಗಿಕೊಂಡಿರುವುದು ಸರಕಾರಿ ಯಂತ್ರದ ನೇರ ದುರುಪಯೋಗವಾಗಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಹೆಸರನ್ನು ಹಾಕಲಾಗಿದೆ. ಆದರೆ ಅವರು ಯಾರೂ ಕೂಡ ಇದರಲ್ಲಿ ಭಾಗವಹಿಸದಂತೆ ಈಗಾಗಲೇ ಸೂಚನೆ ನೀಡಲಾಗಿದೆ ಅದರಂತೆ ಈ ಸಮಾವೇಶವನ್ನು ಬಿಜೆಪಿ ಜನಪ್ರತಿನಿಧಿಗಳು ಬಹಿಷ್ಕರಿಸಲಿದ್ದಾರೆ ಎಂದರು.

ಕಾಟಿಪಳ್ಳದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಆರೋಪಿಗಳು ಬಿಜೆಪಿ ಕಾರ್ಯಕರ್ತರು ಎಂಬ ಸುರತ್ಕಲ್ ಶಾಸಕ ಮೊಯ್ದಿನ್ ಬಾವಾ ಆರೋಪ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಆರೋಪಿಯ ಸಂಬಂಧಿ ಮಹಮ್ಮದ್ ಆಲಿ ಕಾಪು ಕ್ಷೇತ್ರದ ಬಿಜೆಪಿಯ ಯಾವುದೇ ಸಮಿತಿಯಲ್ಲಿ ಇಲ್ಲ . ಮೊಯ್ದಿನ್ ಬಾವಾ ಉದ್ದೇಶ ಪೂರ್ವಕವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಶ ನಾಯಕ್, ಮುಖಂಡರಾದ ಕಟಪಾಡಿ ಶಂಕರ ಪೂಜಾರಿ, ಕುತ್ಯಾರು ನವೀನ್ ಶೆಟ್ಟಿ ಉಪಸ್ಥಿತರಿದ್ದರು.


Spread the love

Exit mobile version