ರಾಮ ಮಂದಿರ ಪ್ರಾಣ ಪ್ರತಿಷ್ಠೆ: ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿ

Spread the love

ರಾಮ ಮಂದಿರ ಪ್ರಾಣ ಪ್ರತಿಷ್ಠೆ: ಜಿಲ್ಲೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಿ

ಉಡುಪಿ: ಜನವರಿ 22ರಂದು ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರಲ್ಲಿ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜನರಿಗೆ ಅವಕಾಶ ಮಾಡಿಕೊಡುವಂತೆ ಖಾಸಗಿ ಸಂಸ್ಥೆಗಳು, ಮಾಲೀಕರಿಗೆ, ವಿವಿಧ ಕ್ಷೇತ್ರದ ಉದ್ಯಮಿಗಳಿಗೆ ವಿಶ್ವ ಹಿಂದು ಪರಿಷದ್ ಮನವಿ ಮಾಡಿದೆ

ಸುಮಾರು 500ವರುಷಗಳ ಹೋರಾಟ, ಲಕ್ಷಾಂತರ ಜನರ ಬಲಿದಾನ, ಕೋಟ್ಯಂತರ ಹಿಂದುಗಳ ಅಸ್ಮಿತೆ ಯ ಸಂಕೇತ ಆಯೋಧ್ಯೆ ಯಲ್ಲಿ ಭವ್ಯವಾದ ರಾಮನ ಮಂದಿರ ನಿರ್ಮಾಣ ನಮ್ಮ ಕಾಲ ಘಟ್ಟದಲ್ಲಿ ನಡೆಯುವುತ್ತಿರುವುದು ಅತ್ಯಂತ ಸಂತೋಷ ಮತ್ತು ಪುಣ್ಯದ ಕಾರ್ಯವಾಗಿದೆ.

 ಅಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜನರಿಗೆ ಸದ್ಯದ ಸ್ಥಿತಿಯಲ್ಲಿ ಆವಕಾಶ ಇಲ್ಲದೇ ಇರುವುದರಿಂದ ಅಲ್ಲಿ ನಡೆಯುವ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲೆಯ ಎಲ್ಲಾ ದೇವಸ್ಥಾನ, ಭಜನಾ ಮಂದಿರಗಳಲ್ಲಿ ವಿಶೇಷ  ಪೂಜೆ, ಮತ್ತು ಧಾರ್ಮಿಕ ಕಾರ್ಯಕ್ರಮಗಳು,ಮತ್ತು ಅಯೋಧ್ಯೆಯ ನೇರ ಪ್ರಸಾರದ ವ್ಯವಸ್ಥೆ ನಡೆಯಲಿದೆ.

 ಈ ಪುಣ್ಯ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗಿಯಾಗಲು ಜನರಿಗೆ ಅನುಕೂಲ ಆಗುವಂತೆ ಜಿಲ್ಲೆಯ ಎಲ್ಲಾ ಖಾಸಗಿ ಸಂಸ್ಥೆಗಳು, ಉದ್ಯಮಿಗಳು, ಮಾಲೀಕರು   ಅವಕಾಶ ಮಾಡಿಕೊಡುವಂತೆ ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ವಿನಂತಿಸಿಕೊಂಡಿದ್ದಾರೆ.


Spread the love