ರೈತ, ಕೃಷಿ ಕೂಲಿ, ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಂಸದ ಕೋಟಗೆ ಮನವಿ

Spread the love

ರೈತ, ಕೃಷಿ ಕೂಲಿ, ಕಾರ್ಮಿಕರ ಬೇಡಿಕೆಗಳ ಬಗ್ಗೆ ಸಂಸದ ಕೋಟಗೆ ಮನವಿ
 

ಉಡುಪಿ: ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ಕೃಷಿ ಕೂಲಿ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ  ಕರ್ನಾಟಕ ನೇತೃತ್ವದಲ್ಲಿ ಇಂದು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ 19 ಪ್ರಮುಖ ಬೇಡಿಕೆಗಳಿರುವ ಮನವಿಯನ್ನು ಮಣಿಪಾಲದ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿರುವ ಸಂಸದರ ಕಛೇರಿಯಲ್ಲಿ ಸಲ್ಲಿಸಲಾಯಿತು.

ಮನವಿಯನ್ನು ಸಂಸದರ ಆಪ್ತ ಕಾರ್ಯದರ್ಶಿ ಮನವಿ ಸ್ವೀಕರಿಸಿದರು. ನಿಯೋಗದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಉಡುಪಿ ಜಿಲ್ಲಾ ಸಂಚಾಲಕ ಚಂದ್ರಶೇಖರ್, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ವಲಯ ಅಧ್ಯಕ್ಷ ಕವಿರಾಜ್ ಎಸ್.ಕಾಂಚನ್, ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್, ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾ ಉಪಾಧ್ಯಕ್ಷೆ ಬಲ್ಕೀಸ್, ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮತ್ತು ಎಚ್.ನರಸಿಂಹ, ಜಿಲ್ಲಾ ಕೋಶಾಧಿಕಾರಿ ಶಶಿಧರ ಗೋಲ್ಲ ಮತ್ತು ಸಿಐಟಿಯು ಮುಖಂಡ ಮೋಹನ್ ಉಪಸ್ಥಿತರಿದ್ದರು.


Spread the love