Home Mangalorean News Kannada News ವಿಧಾನ ಪರಿಷತ್ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಆಯ್ಕೆ- ಉಡುಪಿ ಜಿಲ್ಲಾ ಕಾಂಗ್ರೆಸ್ ಹರ್ಷ

ವಿಧಾನ ಪರಿಷತ್ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಆಯ್ಕೆ- ಉಡುಪಿ ಜಿಲ್ಲಾ ಕಾಂಗ್ರೆಸ್ ಹರ್ಷ

Spread the love

ವಿಧಾನ ಪರಿಷತ್ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಆಯ್ಕೆ- ಉಡುಪಿ ಜಿಲ್ಲಾ ಕಾಂಗ್ರೆಸ್ ಹರ್ಷ

ಉಡುಪಿ: ಜಿಲ್ಲೆಯ ಹಿರಿಯ ಮುತ್ಸದ್ದಿ, ನಿಷ್ಕಳಂಕ ರಾಜಕಾರಣಿ, ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿಯವರು ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಆಯ್ಕೆಗೊಂಡಿರುವುದಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹರ್ಷ ವ್ಯಕ್ತಪಡಿಸಿದೆ.

ಪ್ರತಾಪಚಂದ್ರ ಶೆಟ್ಟಿಯವರು ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಪಕ್ಷ ಬೇಧ ಮರೆತು ಎಲ್ಲರಿಂದಲೂ ಗೌರವಕ್ಕೆ ಪಾತ್ರರಾಗಿದ್ದು, ಸುಮಾರು ನಾಲ್ಕು ಭಾರಿ ವಿಧಾನಸಭೆಯ ಸದಸ್ಯರಾಗಿ ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಡಳಿತದಲ್ಲಿ ಅಪಾರ ಅನುಭವವನ್ನು ಹೊಂದಿದ್ದು ಅರ್ಹವಾಗಿಯೇ ಸಭಾಪತಿ ಸ್ಥಾನ ಒಲಿದು ಬಂದಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆಯವರು ಹರ್ಷ ವ್ಯಕ್ತಪಡಿಸಿ ತಮ್ಮ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.


Spread the love

Exit mobile version