ಶಿರಾಡಿ ಘಾಟಿ ಮಾರ್ಗದಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್‌: ವಾಹನ ಸಂಚಾರ ಸ್ಥಗಿತ

Spread the love

ಶಿರಾಡಿ ಘಾಟಿ ಮಾರ್ಗದಲ್ಲಿ ಉರುಳಿ ಬಿದ್ದ ಅನಿಲ ಟ್ಯಾಂಕರ್‌: ವಾಹನ ಸಂಚಾರ ಸ್ಥಗಿತ

ಮಂಗಳೂರು: ಶಿರಾಡಿ ಘಾಟಿ ಮಾರ್ಗದ ಗುಂಡ್ಯ ಸಮೀಪದ ‌ಕೊಡ್ಯಕಲ್ಲು ಎಂಬಲ್ಲಿ ಎಲ್‌ಪಿಜಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಉರುಳಿ ಬಿದ್ದಿದೆ. ಟ್ಯಾಂಕರ್ ನಿಂದ ಅನಿಲ ‌ಸೋರಿಕೆಯಾಗುತ್ತಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

‘ಚಾಲಕನ ನಿಯಂತ್ರಣ ತಪ್ಪಿ‌ ಟ್ಯಾಂಕರ್ ಉರುಳಿ ಬಿದ್ದಿದೆ. ಅನಿಲ ಸೋರಿಕೆಯಾಗುತ್ತಿದ್ದು, ಅದನ್ನು ನಿಲ್ಲಿಸಲು ಕಾರ್ಯಾಚರಣೆ ನಡೆಯುತ್ತಿದೆ. ಟ್ಯಾಂಕರ್ ಸ್ಥಳಾಂತರ ಮಾಡುವವರೆಗೂ ಈ ಮಾರ್ಗದ ವಾಹನಗಳನ್ನು ಬೇರೆ ಮಾರ್ಗದ ಮೂಲಕ ಕಳುಹಿಸಲಾಗುತ್ತಿದೆ ಎಂದು ತಿಳಿದುಬಂದಿದೆ

ಅಪಘಾತಕ್ಕೀಡಾಗಿರುವ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಿಸುತ್ತಿತ್ತು ಎನ್ನಲಾಗಿದೆ.


Spread the love