ಶೌಚಾಲಯ ನಿರ್ಮಿಸದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್ – ಸುನೀಲ್ ಕುಮಾರ್

Spread the love

ಶೌಚಾಲಯ ನಿರ್ಮಿಸದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್ – ಸುನೀಲ್ ಕುಮಾರ್

ಉಡುಪಿ: ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಅವರು ಶನಿವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡಿದ್ದು ಬಿಜೆಪಿಯಾಗಿದ್ದು ಚೊಂಬು ರಹಿತ ಆಡಳಿತ ದೇಶದಲ್ಲಿ ಕೊಟ್ಟಿದ್ದು ಮೋದಿ -ಬಿಜೆಪಿ ಕಾಲದಲ್ಲಿ ಆದ್ದರಿಂದಲೇ ಇದನ್ನ ಒಪ್ಪುವಂತಹ ಜಾಹೀರಾತುನ್ನು ಕಾಂಗ್ರೆಸ್ ಕೊಟ್ಟಿದೆ

ಮೋದಿ ಕರಿ ನೇರಳಲ್ಲಿ ಕೇಸರಿ ಶಾಲು ಕಾಂಗ್ರೆಸ್ ಜಾಹೀರಾತು ಕುರಿತು ಪ್ರತಿಕ್ರಿಯಿಸಿ ಕೇಸರಿ ಶಾಲು ಹಾಕಲು ನಮಗೆ ಸಂಕೋಚ ಇಲ್ಲ ನಾವು ದೇಶದಲ್ಲಿ ಕೇಸರಿ ಆಡಳಿತ ನಿರ್ಮಾಣ ಮಾಡಲು ಹೊರಟಿದ್ದೇವೆ. ಕೇಸರಿ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದ್ದು ಕೇಸರಿ ರಾಷ್ಟ್ರೀಯ ತೆ ಪ್ರತೀಕ, ನಾವು ಯಾವುದೇ ದ್ವೇಷ ಮಾಡಲು ಹೊರಟಿಲ್ಲ. ಕಾಂಗ್ರೆಸ್ ಒಂದು ಕೋಮಿನ ಜನಕ್ಕೆ ಬೆಂಬಲ ಕೊಡುತ್ತದೆ ಒಂದು ವರ್ಗವನ್ನು ವಿರೋಧಿಸುವುದೇ ಕಾಂಗ್ರೆಸ್ ನ ನಿಲುವು ಆಗಿದೆ ಎಂದರು.

ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದ್ದು, ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆ ಕಾರಣವಾಗಿದೆ. ಏನು ಬೇಕಾದರೂ ಮಾಡಬಹುದು ಎಂದು ಪರೋಕ್ಷವಾಗಿ ಬೆಂಬಲ ಕೊಡುತ್ತಿದೆ. ಮುಸಲ್ಮಾನರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಪ್ರಾರಂಭ ಮಾಡಿದ್ದು, ಸಾಂತ್ವಾನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಸಿಎಂ ಹೇಳುತ್ತಾರೆ.

ರಾಜ್ಯದ ಹೆಣ್ಣು ಮಕ್ಕಳ ರಕ್ಷಣೆಗೆ ಯಾರು ಬರುತ್ತಾರೆ? ರಾಮೇಶ್ವರಂ ಬಾಂಬ್ ಸ್ಫೋಟ ಪಾರ್ಕ್ ಜಿಂದಾಬಾದ್ ಕೊಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹೋಗಲೇ ಹತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಮುಖ್ಯಮಂತ್ರಿ ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು. ಲವ್ ಜಿಹಾದ್, ಮತಾಂದತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದ್ದು, ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತ ಬೇಕಾದ ಅನಿವಾರ್ಯತೆ ಇದೆ ಎಂದರು


Spread the love