ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಉಡುಪಿಯಲ್ಲಿ ಗ್ರಾಮ ವಾಸ್ತವ್ಯ

Spread the love

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಉಡುಪಿಯಲ್ಲಿ ಗ್ರಾಮ ವಾಸ್ತವ್ಯ
ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಹೆಚ್. ಆಂಜನೇಯ ಅವರು ಡಿಸೆಂಬರ್ 31 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಕುಂದಾಪುರ ತಾಲೂಕಿನ ವಿವಿಧ ಗಿರಿಜನ ಹಾಡಿಗಳಿಗೆ ಭೇಟಿ ನೀಡಿ, ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂರೂರು ಕೊರಗರ ಕಾಲೋನಿಯಲ್ಲಿ , ಉಡುಪಿ ಜಿಲ್ಲೆಯ ಆದಿವಾಸಿ ಬುಡಕಟ್ಟು(ಕೊರಗ) ಸಮುದಾಯದವರೊಂದಿಗೆ ಸಮಾಲೋಚನೆ ನಡೆಸಿ, ಅವರ ಸಮಸ್ಯೆಗೆ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಸೂಚಿಸಿ ವಿವಿಧ ಇಲಾಖೆ/ನಿಗಮಗಳಿಂದ ಸವಲತ್ತು ವಿತರಣೆ ಮಾಡಿ ರಾತ್ರಿ ಮೂರೂರು ಕೊರಗರ ಕಾಲೋನಿಯಲ್ಲಿ ವಾಸ್ತವ್ಯ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.


Spread the love