ಸಿಎಂ ಗೆ ಅವಹೇಳನ: ಬಿಜೆಪಿಗರ ಗೂಂಡಾ ವರ್ತನೆಗೆ ಶಾಸಕ ಯಶ್ಪಾಲ್ ಸುವರ್ಣ ಕ್ಷಮೆಯಾಚಿಸಲಿ – ಜ್ಯೋತಿ ಹೆಬ್ಬಾರ್

Spread the love

ಸಿಎಂ ಗೆ ಅವಹೇಳನ: ಬಿಜೆಪಿಗರ ಗೂಂಡಾ ವರ್ತನೆಗೆ ಶಾಸಕ ಯಶ್ಪಾಲ್ ಸುವರ್ಣ ಕ್ಷಮೆಯಾಚಿಸಲಿ – ಜ್ಯೋತಿ ಹೆಬ್ಬಾರ್

ಉಡುಪಿ: ಪ್ರತಿಭಟನೆಯ ನೆಪದಲ್ಲಿ ಶಾಸಕರ ಸಮ್ಮುಖದಲ್ಲೇ ನಾಡಿನ ಮುಖ್ಯಮಂತ್ರಿಯವರ ಪ್ರತಿಕೃತಿ ದಹಿಸಿ ಅದಕ್ಕೆ ಚಪ್ಪಲಿಯಿಂದ ಅವಮಾನ ಮಾಡಿದ ಬಿಜೆಪಿಗರ ಗೂಂಡಾ ವರ್ತನೆ ಖಂಡನೀಯ. ಜನರಿಂದ ಆಯ್ಕೆಯಾದ ಶಾಸಕ ಯಶಪಾಲ್ ಸುವರ್ಣ ಅವರು ಕೂಡಲೇ ರಾಜ್ಯದ ಜನರ ಕ್ಷಮೆ ಯಾಚಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಆಗ್ರಹಿಸಿದ್ದಾರೆ.

ಈಗಾಗಲೇ ಬಿಜೆಪಿಗರ ಪುಂಡಾಟಕ್ಕೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಶಾಸಕರು, ನಗರಸಭಾ ಅಧ್ಯಕ್ಷರು, ಸದಸ್ಯರು ಹಾಗೂ ಬಿಜೆಪಿ ನಾಯಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು ನಾಡಿನ 6 ಕೋಟಿ ಜನರ ಮುಖ್ಯಮಂತ್ರಿಗೆ ಮಾಡಿದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರು ಕೇವಲ ಕಾಂಗ್ರೆಸ್ ಮುಖ್ಯಮಂತ್ರಿಗಳಲ್ಲ ಬದಲಾಗಿ ಇಡೀ ಕರ್ನಾಟಕದ ಮುಖ್ಯಮಂತ್ರಿಗಳು ಎನ್ನುವ ಕನಿಷ್ಠ ಜ್ಞಾನ ಬಿಜೆಪಿಗರಿಗೆ ಇಲ್ಲದಿರುವುದು ನಾಚೀಕೆಗೇಡಿನ ಸಂಗತಿಯಾಗಿದೆ.

ಸಂಸ್ಕೃತಿ ಆಚಾರ ವಿಚಾರದ ಕುರಿತು ಸದಾ ಬೊಬ್ಬಿಡುವ ಬಿಜೆಪಿಯ ಮಹಿಳಾ ನಾಯಕರು ರಾಜ್ಯದ ಮುಖ್ಯಮಂತ್ರಿಯೊಬ್ಬರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆಯುತ್ತಿರುವಾಗ ಕಣ್ಣಿುದ್ದು ಕುರುಡರಂತೆ ವರ್ತನೆ ಮಾಡಿರುವುದು ಇವರ ನಿಜವಾದ ಸಂಸ್ಕೃತಿ ಯಾವುದು ಎನ್ನುವುದು ಎದ್ದು ಕಾಣಿಸುತ್ತದೆ. ಕೇವಲ ರಾಜಕೀಯ ದುರುದ್ದೇಶದಿಂದ ಸಭ್ಯತೆ ಮೀರುತ್ತಿರುವ ಬಿಜೆಪಿ ನಾಯಕರ ವಿರುದ್ದ ಪೊಲೀಸ್ ಇಲಾಖೆ ನಿರ್ದಾಕ್ಷಣ್ಯ ಕ್ರಮ ವಹಿಸುವಂತೆ ಪ್ರಕಟಣೆಯಲ್ಲಿ ಅವರು ಆಗ್ರಹಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments