ಸಿಸಿಬಿ ಪೊಲೀಸರಿಂದ ಕುಖ್ಯಾತ ದನಕಳ್ಳನ ಬಂಧನ

Spread the love

ಸಿಸಿಬಿ ಪೊಲೀಸರಿಂದ ಕುಖ್ಯಾತ ದನಕಳ್ಳನ ಬಂಧನ

ಮಂಗಳೂರು: ನಗರದ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ಸ್ ಶೆಡ್ ಎಂಬಲ್ಲಿ ಮೇಯುತ್ತಿದ್ದ 2 ದನ ಹಾಗೂ ಕರುವನ್ನು ಕಳವು ಕಳವು ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯೊಬ್ಬನನ್ನು ದಸ್ತಗಿರಿ ಮಾಡುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತನನ್ನು ಕಸಬಾ ಬೆಂಗ್ರೆ ನಿವಾಸಿ ಅಹಮ್ಮದ್ ಕಬೀರ್ @ ಬೆಂಗ್ರೆ ಕಬೀರ್ (30) ಎಂದು ಗುರುತಿಸಲಾಗಿದೆ.

ಜುಲೈ 5ರಂದು ಮಂಗಳೂರು ನಗರದ ದಕ್ಷಿಣ ಪೊಲೀಸ್ ಠಾಣಾ ಗೂಡ್ಸ್ ಶೆಡ್ ಬಳಿಯಲ್ಲಿ ಮೇಯುತ್ತಿದ್ದ ದನಗಳ ಪೈಕಿ ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ 2 ದನ ಹಾಗೂ ಕರುವನ್ನು ಕಳ್ಳತನವಾಗಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಅಬ್ದುಲ್ ಕಬೀರ್ @ ಪಾರಿವಾಳ ಕಬೀರ್ ಎಂಬಾತನನ್ನು ಈಗಾಗಲೇ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಆತನಿಂದ ಕಳ್ಳತನ ಮಾಡಿದ ದನ ಹಾಗೂ ಕರುವನ್ನು ಸಾಗಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ರಿಡ್ಜ್ ಕಾರನ್ನು ಸ್ವಾಧೀನಪಡಿಸಿಕೊಂಡು ಪ್ರಕರಣವನ್ನು ಭೇದಿಸಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು. ಈ ಕೃತ್ಯದಲ್ಲಿ ಭಾಗಿಯಾದ ಇನ್ನೋರ್ವ ಪ್ರಮುಖ ಆರೋಪಿ ಅಹಮ್ಮದ್ ಕಬೀರ್ @ ಬೆಂಗ್ರೆ ಕಬೀರ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಅಹಮ್ಮದ್ ಕಬೀರ್ @ ಬೆಂಗ್ರೆ ಕಬೀರ್ ಎಂಬಾತನ ವಿರುದ್ಧ ಈ ಹಿಂದೆ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ ಠಾಣೆಗಳಲ್ಲಿ ಹಾಗೂ ಮಂಗಳೂರು ನಗರದ ಬಜ್ಪೆ, ಉಳ್ಳಾಲ, ಕೊಣಾಜೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಗಳಲ್ಲಿ ದನಕಳ್ಳತನಕ್ಕೆ ಸಂಬಂಧಪಟ್ಟಂತೆ 13 ಪ್ರಕರಣಗಳು ಪಣಂಬೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳು ದಾಖಲಾಗಿರುತ್ತದೆ. ಈತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳ ಪುಣ್ಯಕೋಟಿ ಗೋಶಾಲೆಯಿಂದ ದನ ಕಳ್ಳತನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದನು. ಈತನು ಪ್ರಕರಣದ ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಕೊಣಾಜೆ ಹಾಗೂ ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ನ್ಯಾಯಾಲಯವು ಈತನ ವಿರುದ್ಧ ವಾರಂಟ್ ಹೊರಡಿಸಿರುತ್ತದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಯವರಾದ ಶ್ಯಾಮ್ ಸುಂದರ್ ಹೆಚ್ ಎಂ ಮತ್ತು ಹೆಚ್.ಡಿ ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.


Spread the love