Home Mangalorean News Kannada News ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತದಿಂದ ಸಾಮಾಜಿಕ ಕಾರ್ಯಕರ್ತ ಮೃತ್ಯು

ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತದಿಂದ ಸಾಮಾಜಿಕ ಕಾರ್ಯಕರ್ತ ಮೃತ್ಯು

Spread the love
RedditLinkedinYoutubeEmailFacebook MessengerTelegramWhatsapp

ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತದಿಂದ ಸಾಮಾಜಿಕ ಕಾರ್ಯಕರ್ತ ಮೃತ್ಯು

ಮಂಗಳೂರು: ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಸಾಮಾಜಿಕ ಕಾರ್ಯಕರ್ತ ನಿಧನರಾದ ದಾರುಣ ಘಟನೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದಿದೆ.

ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದ ಬೆಂಗಳೂರಿನ ಸಿ ಕೆ ರವಿಚಂದ್ರನ್ (63) ಎಂದು ಗುರುತಿಸಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘದಿಂದ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಸಂಘಟನೆಯಿಂದ ಬಂದಿದ್ದವರನ್ನು ಹೆಸರೆತ್ತಿ, ಸಿ ಕೆ ರವಿಚಂದ್ರನ್ ಮಾಧ್ಯಮದವರಿಗೆ ಪರಿಚಯ ಪಡಿಸುತ್ತಿದ್ದರು.

ಈ ವೇಳೆಯಲ್ಲಿಯೇ ಅವರಿಗೆ ಹೃದಯಾಘಾತವಾಗಿದೆ. ಹೃದಯಾಘಾತಕ್ಕೊಳಗಾದ ಕೂಡಲೇ ಆಟೋದಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಕೂಡಲೇ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಿ ಕೆ ರವಿಚಂದ್ರನ್ ಅವರು ಕಾಂಗ್ರೆಸ್ ಪಕ್ಷ ಸೇರಿದಂತೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.


Spread the love

Exit mobile version