ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

Spread the love

ಸುರತ್ಕಲ್: ಮನೆ ಮೇಲೆ ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುರತ್ಕಲ್: ಭಾರೀ ಗಾಳಿ-ಮಳೆಗೆ ಜೋಕಟ್ಟೆಯ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ.

ಗುರುವಾರ ಭಾರೀ ಮಳೆಗೆ ಮನೆಯ ಹಿಂಬದಿ ಗುಡ್ಡ ಕುಸಿದು‌ ಮನೆಗೆ ಬಿದ್ದಿದೆ. ಇದರಿಂದ ಮನೆಯ ಗೋಡೆ ಹತ್ತಿರದಲ್ಲಿ ಮಲಗಿದ್ದ ಬಾಲಕನ ಮೇಲೆ ಕುಸಿದು ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮನೆಯಲ್ಲಿದ್ದ ಉಳಿದ ಐದು ಮಂದಿಗೆ ಗಾಯವಾಗಿದೆ. ಮನೆ ಭಾಗಶಃ ಹಾನಿಯಾಗಿದ್ದು, ಸ್ಥಳಕ್ಕೆ ತುರ್ತು ರಕ್ಷಣಾ ತಂಡ ತೆರಳಿದೆ.


Spread the love