ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ

Spread the love

ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರ ಬಂಧನ

ಮಂಗಳೂರು: ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಂಧಿತನನ್ನು ಚಂದ್ರಶೇಖರ್ (26), ಈಶ್ವರ್ @ ಕಿಶೋರ್ (24), ಅಕ್ಷಿತ್ (27) ಯೋಗಿಶ್ @ಉಮೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ.

ವಿಟ್ಲ ಉಪನಿರೀಕ್ಷಕ ಯಲ್ಲಪ್ಪ ಎಸ್ ಅವರಿಗೆ ಸೋಮವಾರ ರಾತ್ರಿ 1 ಗಂಟೆಗೆ ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಹೇಮಾಜೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪಿಟ್ ಆಟಕ್ಕೆ ಹಣವನ್ನು ಪಣವಾಗಿಟ್ಟು ಜುಗಾರಿ ಆಡುತ್ತಿದ್ದಾರೆ ಎಂಬ ಮಾಹಿತಿ ಬಂದಿದ್ದು ಅದರಂತೆ ಸಿಬಂದಿಯವರನ್ನು ಕರೆದುಕೊಂಡು ದಾಳಿ ನಡೆಸಿದ್ದು ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರಿಂದ ಇಸ್ಪೀಟು ಆಟಕ್ಕೆ ಉಪಯೋಗಿಸುತ್ತಿದ್ದ ರೂ 4200 ನಗದು, ಇಸ್ಪೀಟ್ ಎಲೆ, ಹಳೇ ಪೇಪರ್, ಕ್ಯಾಂಡಲನ್ನು ವಶಪಡಿಸಿಕೊಳ್ಳಲಾಗಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love