ಹಿರಿಯ ಕಾಂಗ್ರೆಸಿಗ, ಕಟಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ವಿನಯ ಬಲ್ಲಾಳ್ ನಿಧನ

Spread the love

ಹಿರಿಯ ಕಾಂಗ್ರೆಸಿಗ, ಕಟಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ವಿನಯ ಬಲ್ಲಾಳ್ ನಿಧನ

ಉಡುಪಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ್ ಬಲ್ಲಾಳ್ ಅವರು ಆಗಸ್ಟ್ 27 ಮಂಗಳವಾರದಂದು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಿನಯ್ ಬಲ್ಲಾಳ್ ಸಕ್ರಿಯ ಸಮಾಜ ಸೇವಕ ಮತ್ತು ಸಮರ್ಪಿತ ಕಾಂಗ್ರೆಸ್ ಸದಸ್ಯರಾಗಿದ್ದರು. ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಕಟಪಾಡಿ ಗ್ರಾಮ ಪಂಚಾಯಿತಿಗೆ ನಾಲ್ಕು ಬಾರಿ ಸದಸ್ಯರಾಗಿದ್ದ ಅವರು ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ವಿನಯ್ ಬಲ್ಲಾಳ್ ಅವರ ಇಬ್ಬರು ಪುತ್ರರನ್ನು ಅಗಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments