Home Mangalorean News Kannada News  ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

 ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

Spread the love
RedditLinkedinYoutubeEmailFacebook MessengerTelegramWhatsapp

 ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಕೊಲೆ, ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ  ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.

ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ‌ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕು ಹಾಕಿದ ಫಯಾಜ್
ಕೊಲೆಯಾದ ನೇಹಾ ಹಿರೇಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್‌ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದಾನೆ. ಹೀಗಾಗಿ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version