ಹೆಬ್ರಿ: ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ದಾರುಣ ಸಾವು

Spread the love

ಹೆಬ್ರಿ: ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದು ದಾರುಣ ಸಾವು

ಹೆಬ್ರಿ: ಹೆಬ್ರಿಯಲ್ಲಿ ಮಲಗಿದ್ದ ಕಾರ್ಮಿಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ

ಮೃತ ವ್ಯಕ್ತಿಯನ್ನು ಸಾಗರ ತಾಲೂಕಿನ ಕೊರ್ಲಿ ಕೊಪ್ಪ ನಿವಾಸಿ ಶಿವರಾಜ್ ಎಂದು ಗುರುತಿಸಲಾಗಿದೆ.

ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಬಂಕ್ ಆವರಣದಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಲಾರಿ ಕಾರ್ಮಿಕ ಶಿವರಾಜ್ ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದರು. ಈ ವೇಳೆ ಪೆಟ್ರೋಲ್ ಹಾಕಿಸಿಕೊಂಡು ಹೋಗುತ್ತಿದ್ದ ಟಿಪ್ಪರ್ ಚಾಲಕ,ಮಲಗಿದ್ದ ಶಿವರಾಜ್ ಮೇಲೆಯೇ ವಾಹನ ಚಲಾಯಿಸಿಕೊಂಡು ಹೋಗಿದ್ದಾನೆ. ಇದರ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love