Home Mangalorean News Kannada News ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ

ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ

Spread the love

ಕಾಂಗ್ರೆಸ್ ಸೇವಾದಳ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ಕಾಂಗ್ರೆಸ್ ಸೇವಾದಳ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 101 ನೇ ಜನ್ಮದಿನಾಚರಣೆ ಅಂಗವಾಗಿ ಮಣಿಪಾಲ ಕೆಎಮ್ ಸಿ ಆಸ್ಪತ್ರೆ ಸಹಯೋಗದಲ್ಲಿ ತೆಂಕ ಎರ್ಮಾಳು ರಾಜೀವ್ ಗಾಂಧಿ ಪೊಲಿಟಿಕಲ್ ಎಜುಕೇಶನ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ಸಂಘಟನ ಕಾರ್ಯದರ್ಶಿ ಪ್ಯಾರೆಜಾನ್ ಮಾತನಾಡಿ ಕಾಂಗ್ರೆಸ್ ಸೇವಾದಳವು ಸ್ವಾತಂತ್ರ್ಯ ಪೂರ್ವದಲ್ಲಿಯೇ ಹುಟ್ಟಿಕೊಂಡಿದ್ದು, ರಾಷ್ಟ್ರ ಸಮಾಜಕ್ಕಾಗಿ ಕೆಲಸ ಮಾಡುತ್ತಿದೆ. ಸೇವಾದಳದ ಕಾರ್ಯಕರ್ತರು ದೇಶದಾದ್ಯಂತ ನಿಸ್ವಾರ್ಥ ಸೇವೆ ಮಾಡುತ್ತಿದ್ದು ಅವರಿಗೆ ಪ್ರೋತ್ಸಾಹ ಬೇಕಾಗಿದೆ ಎಂದರು

ಶಿಬಿರದಲ್ಲಿ 70 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಯು ಆರ್ ಸಭಾಪತಿ, ಜಿಲ್ಲಾ ಅಧ್ಯಕ್ಷ ಜನಾರ್ಧನ ತೋನ್ಸೆ, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಜಿಪಂ ಸದಸ್ಯ ವಿಲ್ಸನ್ ರೊಡ್ರಿಗಸ್, ಸೇವಾದಳದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version