ಎನ್.ಎಸ್.ಯು.ಐ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಯ್ಯದ್ ಪುರ್ಕಾನ್ ನೇಮಕ

Spread the love

ಎನ್.ಎಸ್.ಯು.ಐ. ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಯ್ಯದ್ ಪುರ್ಕಾನ್ ನೇಮಕ

ಉಡುಪಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕರ್ನಾಟಕ (ಎನ್ ಎಸ್ ಯು ಐ) ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲೆಯ ಸಯ್ಯದ್ ಪುರ್ಕಾನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕರ್ನಾಟಕ (ಎನ್ ಎಸ್ ಯು ಐ) ಇದರ ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಅವರು ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ.

ಸಯ್ಯದ್ ಪುರ್ಕಾನ್ ಅವರು ಉಡುಪಿ ಜಿಲ್ಲೆಯ ಹೆಮ್ಮಾಡಿಯವರಾಗಿದ್ದು, ಪ್ರಸ್ತುತ ಉಡುಪಿ ಜಿಲ್ಲಾ ಎನ್ ಎಸ್ ಯು ಐ ಉಪಾಧ್ಯಕ್ಷರಾಗಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.


Spread the love