ಕುಂದಾಪುರ: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

Spread the love

ಕುಂದಾಪುರ: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಕುಂದಾಪುರ: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಕುಂದಾಪುರ ನಗರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬಂಧಿತರನ್ನು ಕುಂದಾಪುರದ ಮೊಹಮ್ಮದ್ ಸಫಾನ್(32), ಮೊಹಮ್ಮದ್ ಅಮೀರ್ ಹುಸೇನ್ (19) ಮತ್ತು ಮಂಗಳೂರು ಪೆರ್ಮುದೆ ನಿವಾಸಿ ಅಬ್ದುಲ್ ರೆಹಮಾನ್ ಮಿಯಾಜ್(21) ಎಂದು ಗುರುತಿಸಲಾಗಿದೆ.

ಶನಿವಾರ ಕುಂಭಾಶಿ ಗ್ರಾಮದ ಬೀಜಾಡಿ-ವಕ್ವಾಡಿ ರಸ್ತೆಯಿಂದ ವಿನಾಯಕ ನಗರ ಕಡೆಗೆ ಹೋಗುವ ಮಣ್ಣು ರಸ್ತೆಯ ತಿರುವಿನಲ್ಲಿ ಮಧುವನ ಎಂಬ ಮನೆಯ ಎದುರು ಮೂವರು ವ್ಯಕ್ತಿಗಳು ಎರಡು ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿರುವುದಾಗಿ ಬಾತ್ಮಿದಾರರೊಬ್ಬರು ನೀಡಿದ ಮಾಹಿತಿ ಮೇರೆಗೆ ಕುಂದಾಪುರ ಠಾಣಾಧಿಕಾರಿ ಸದಾಶಿವ ಆರ್ ಗವರೋಜಿ ಅವರು ದಾಳಿ ನಡೆಸಿದ್ದು ಈ ವೇಳೆ ತಪ್ಪಿಸಿಕೊಳ್ಳಲು ಆರೋಪಿಗಳು ಪ್ರಯತ್ನಿಸಿದ್ದು, ಅವರನ್ನು ಸುತ್ತವರಿದು ವಿಚಾರಣೆ ಮಾಡಿದಾಗ ಗಾಂಜಾ ಪತ್ತೆಯಾಗಿದೆ.

ಆರೋಪಿಗಳಿಂದ 195 ಗ್ರಾಮ್ ತೂಕದ ಗಾಂಜಾವನ್ನು ಸ್ವಾಧಿನಪಡಿಸಿಕೊಂಡಿದ್ದು ಅಂದಾಜು ಮೌಲ್ಯ 6500/- ರೂಪಾಯಿ ಆಗಬಹುದು. ಹಾಗೂ ಆರೋಪಿತರಿಂದ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಅವುಗಳ ಅಂದಾಜು ಮೌಲ್ಯ 30000 ರೂ ಆಗಬಹುದು

ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.


Spread the love