ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ ಆಯ್ಕೆ

Spread the love

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ ಆಯ್ಕೆ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ತೆಗ್ಗರ್ಸೆ ಬಾಬು ಶೆಟ್ಟಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ರಾಜ್ಯದ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯ ಆಯುಕ್ತರು ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಎಂಟು ಜನ ಸದಸ್ಯರನ್ನು ಹಾಗೂ ಓರ್ವ ಪದನಿಮಿತ್ತ ಸದಸ್ಯರನ್ನು ನೇಮಕ ಮಾಡಿ ಆದೇಶಿಸಿದ್ದರು. ಶುಕ್ರವಾರ ನಡೆದ ವ್ಯವಸ್ಥಾಪನ ಸದಸ್ಯರ ಪ್ರಥಮ ಸಭೆಯಲ್ಲಿ ಬಾಬು ಶೆಟ್ಟಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಶೆಟ್ಟಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಭಿಲಾಷ್ ಪಿ ವಿ, ಮಾಲಿಂಗ ವೆಂಕ ನಾಯ್ಕ್, ರಘುರಾಮ್ ದೇವಾಡಿಗ, ಯು. ರಾಜೇಶ್ ಕಾರಂತ್, ಧನಾಕ್ಷಿ, ಸುರೇಂದ್ರ ಶೆಟ್ಟಿ, ಸುಧಾ ಕೆ ಹಾಗೂ ತಂತ್ರಿ ನಿತ್ಯಾನಂದ ಅಡಿಗ ಭಾಗವಹಿಸಿದ್ದರು.

ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಆದ ಬಳಿಕ ಶ್ರೀ ದೇವಿಯ ದರ್ಶನ ಪಡೆದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತೆಗ್ಗರ್ಸೆ ಬಾಬು ಶೆಟ್ಟಿಯವರು, ವ್ಯವಸ್ಥಾಪನ ಸಮಿತಿಯ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಅವಿರೋಧವಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷನಾಗಿ ಆಯ್ಕೆಯಾಗಿರುವುದಕ್ಕೆ ಸಂತೋಷವಿದೆ. ಕೊಲ್ಲೂರು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಹಾಗೂ ಇಲ್ಲಿಗೆ ಬರುವ ಭಕ್ತರಿಗೆ ಮೂಲಭೂತ ಸೌಕಲರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಿತಿಯ ಸದಸ್ಯರ ಅರ್ಚಕರ ಹಾಗೂ ಸಿಬ್ಬಂದಿಗಳ ಸಹಕಾರವನ್ನು ಪಡೆದು ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.


Spread the love
Subscribe
Notify of

0 Comments
Inline Feedbacks
View all comments