ಗಂಗಾವತಿ ರೈಲ್ವೆ ಹಳಿ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಮೃತ್ಯು

Spread the love

ಗಂಗಾವತಿ ರೈಲ್ವೆ ಹಳಿ ಮಲಗಿದ್ದ ಯುವಕರ ಮೇಲೆ ರೈಲು ಹರಿದು ಮೂವರು ಮೃತ್ಯು

ಗದಗ: ತಮಾಷೆಗೆಂದು ಔತಣಕೂಟ ಮಾಡಿದ ಬಳಿಕ ರೈಲ್ವೆ ಹಳಿಯ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೃತಪಟ್ಟ ವ ಘಟನೆ ಇಲ್ಲಿನ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ.

ಮೃತ ಯುವಕರನ್ನು ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್ ನ ವೆಂಕಟ ಭೀಮರಾಯ ಮಂಗಳೂರು (20) ಎಂದು ಗುರುತಿಸಲಾಗಿದೆ.

ಮೂವರು ಯುವಕರು ರೈಲ್ವೆ ಹಳಿಯ ಪಕ್ಕದಲ್ಲಿ ಔತಣಕೂಟ ಮುಗಿಸಿ ಬಳಿಕ ತಮಾಷೆಗೆಂದು ಹಳಿಯ ಮೇಲೆ ಮಲಗಿದ್ದ ವೇಳೆ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸಂಜರ್ ರೈಲು ಬಂದಿದ್ದು ಹಳಿಯ ಮೇಲೆ ಮಲಗಿದ್ದ ರೈಲು ಯುವಕರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಗದಗ ವಿಭಾಗದ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love