ಪ್ರಶಸ್ತಿಗೆ ತಡೆ: ನಾಳೆ (ಸೆ.6) ಬಿಜೆಪಿ ಜಿಲ್ಲಾ ಮಹಿಳಾ ಮತ್ತು ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

Spread the love

ಪ್ರಶಸ್ತಿಗೆ ತಡೆ: ನಾಳೆ (ಸೆ.6) ಬಿಜೆಪಿ ಜಿಲ್ಲಾ ಮಹಿಳಾ ಮತ್ತು ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಉಡುಪಿ: ಶಿಕ್ಷಕರ ರಾಜ್ಯ ಪ್ರಶಸ್ತಿ ತಡೆ ಹಿಡಿದ ರಾಜ್ಯ ಕಾಂಗ್ರೆಸ್ ಸರಕಾರದ ಓಲೈಕೆ ನೀತಿ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮತ್ತು ಯುವಮೋರ್ಚಾ ವತಿಯಿಂದ ಸಪ್ಟೆಂಬರ್ 6 ರಂದು ಶುಕ್ರವಾರ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ಜಿ. ರಾಮಕೃಷ್ಣ ಅವರ ರಾಜ್ಯ ಮಟ್ಟದ ‘ಉತ್ತಮ ಶಿಕ್ಷಕ ಪ್ರಶಸ್ತಿ’ಯನ್ನು ಓಲೈಕೆ ರಾಜಕಾರಣದಿಂದಾಗಿ ತಡೆಹಿಡಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಸಪ್ಟೆಂಬರ್ 6 ರಂದು ಶುಕ್ರವಾರ ಮಧ್ಯಾಹ್ನ ಗಂಟೆ 3.30ಕ್ಕೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನೆ ನಡೆಯಲಿದೆ.

ಈ ಪ್ರತಿಭಟನೆಯಲ್ಲಿ ಬಿಜೆಪಿ ಪ್ರಮುಖರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಥ್ವಿ ರಾಜ್ ಶೆಟ್ಟಿ ಬಿಲ್ಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments