ಭಾರತ್ ಬಂದ್ ಜೆಡಿಎಸ್ ಸಂಪೂರ್ಣ ಬೆಂಬಲ

Spread the love

ಭಾರತ್ ಬಂದ್ ಜೆಡಿಎಸ್ ಸಂಪೂರ್ಣ ಬೆಂಬಲ

ಕೇಂದ್ರ ಸರಕಾರವು ದಿನನಿತ್ಯ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ದಿನನಿತ್ಯ ಹೆಚ್ಚಳ ಮಾಡುತ್ತಾ ಬಂದಿದ್ದು, ದಿನ ನಿತ್ಯ ಅಗತ್ಯ ಸಾಮಾಗ್ರಿಗಳ ಬೆಲೆ ಗಗನಕ್ಕೇರಿತ್ತಿದ್ದು ವಾಹನ ಮಾಲೀಕರು ಹಾಗೂ ಜನ ಸಾಮಾನ್ಯರು ಬದುಕಲು ಅಸಾಧ್ಯವಾಗಿದೆ.  ಈ ಪ್ರಯುಕ್ತ ಸೆಪ್ಟೆಂಬರ್ 10 ರಂದು ಪ್ರಗತಿ ಪರ ಸಂಘಟನೆಗಳು ನೀಡಿರುವ ಭಾರತ ಬಂದ್‍ಗೆ ಸಂಪೂರ್ಣ ಸಹಕಾರ ನೀಡಿ ಅ ದಿನ ಬೆಳಿಗ್ಗೆ 10.00 ರಿಂದ ಸಂಜೆ 5.00 ರ ತನಕ ನಡೆಯುವ ಹಂಪನಕಟ್ಟೆ ಸಿಗ್ನಲ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿಗೆ ನಡೆಯುವ ಜಾಥಾ ಹಾಗೂ ಪ್ರತಿಭಟನೆಗೆ ಜಿಲ್ಲಾ ಜೆಡಿಎಸ್ ಸಂಪೂರ್ಣ ಬೆಂಬಲ ಘೋಷಿಸಿದೆ.

ಜಿಲ್ಲೆಯ ಎಲ್ಲಾ ಜೆಡಿಎಸ್ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಜೆಡಿಎಸ್ ಜಿಲ್ಲಾ ಅದ್ಯಕ್ಷರಾದ ಮಹಮ್ಮದ್ ಕುಂಞ, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ರಾಜ್ಯ ಉಪಾಧ್ಯಕ್ಷರಾದ ಎಂ.ಬಿ ಸದಾಶಿವ, ಜಿಲ್ಲಾ ವಕ್ತಾರರಾದ ಸುಶೀಲ್ ನೊರೊನ್ಹಾ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Spread the love