ಮಂಗಳೂರು: ಕ್ವಿಟ್ ಇಂಡಿಯಾ ವರ್ಷಾಚರಣೆ – ಹೋರಾಟಗಾರರಿಗೆ ಸನ್ಮಾನ

Spread the love

ಮಂಗಳೂರು: ಕ್ವಿಟ್ ಇಂಡಿಯಾ ವರ್ಷಾಚರಣೆ – ಹೋರಾಟಗಾರರಿಗೆ ಸನ್ಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆಯ ಅಂಗವಾಗಿ ಗೋವಾ ವಿಮೋಚನಾ ಹೋರಾಟಗಾರ ಮಟ್ಟಾರ್ ವಿಠಲ್ ಕಿಣಿ ಅವರಿಗೆ ನಗರದ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಮಟ್ಟಾರ್ ವಿಠಲ್ ಕಿಣಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಮತ್ತಿತರರು ಇದ್ದರು.


Spread the love