ಯುವತಿಯರೊಂದಿಗೆ ಅನುಚಿತ ವರ್ತನೆ ಮಾಡಿದ ವ್ಯಕ್ತಿ, ಪ್ರಕರಣ ದಾಖಲು

Spread the love

ಯುವತಿಯರೊಂದಿಗೆ ಅನುಚಿತ ವರ್ತನೆ ಮಾಡಿದ ವ್ಯಕ್ತಿ, ಪ್ರಕರಣ ದಾಖಲು

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯೋರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.

ನವಭಾರತ್ ಸರ್ಕಲ್ ಬಳಿ ಯುವತಿಯರು ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪ್ರದೀಪ್ ಎಂಬ ವ್ಯಕ್ತಿಯೋರ್ವ ಅವರ ಬಳಿ ಹೋಗಿ ಹಣ ಕೊಡುತ್ತೇನೆ ಬರುತ್ತೀರಾ ಎಂದು ಕೇಳಿದ್ದಾನೆ ಎನ್ನಲಾಗಿದೆ. ತಕ್ಷಣವೇ ಯುವತಿಯರು ಆತನನ್ನು ಹಿಗ್ಗಾಮುಗ್ಗ ತಾರಾಟೆಗೆ ತೆಗೆದುಕೊಂಡು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಾಂಡೇಶ್ವರ ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments