ರೈಲಿನಡಿಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Spread the love

ರೈಲಿನಡಿಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಸೋಮೇಶ್ವರ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಮೃತರನ್ನು ಮಂಗಳೂರಿನಲ್ಲಿ ಬಿ.ಇ. ಇಂಜಿನಿಯರಿಂಗ್ ಮಾಡುತ್ತಿರುವ ಬೆಳಗಾವಿ ಮೂಲದ ವಿದ್ಯಾರ್ಥಿ ಸಮ್ಮದ್ ರಾಯಗೌಡ(23) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಫೆಬ್ರವರಿ 28 ರಂದು ಸಮ್ಮದ್ ಅವರು   ಸೋಮೇಶ್ವರ ರೈಲ್ವೆ ನಿಲ್ದಾಣಕ್ಕೆ ಬಂದು ಹಾದುಹೋಗುವ ರೈಲಿನ ಮುಂದೆ ರೈಲ್ವೆ ಹಳಿ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.


Spread the love