ವಿಧಾನಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ

Spread the love

ವಿಧಾನಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಕೆ

ಮಂಗಳೂರು: ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಕಿಶೋರ್ ಕುಮಾರ್ ಪುತ್ತೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ದ.ಕ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳೂ ಆಗಿರುವ ದಕ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ದಕ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments